Breaking News

‘ಅಂಬೇಡ್ಕರ್ ಅಭಿವೃದ್ಧಿ ಮಂಡಳಿ ಅಧ್ಯಕ್ಷ’ರಾಗಿ ‘ಹೆಚ್.ನಾಗೇಶ್’ಗೆ ನೇಮಕ

Spread the love

ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದಂತ ಸಚಿವ ಹೆಚ್.ನಾಗೇಶ್ ಸಿಎಂ ಸೂಚನೆಯ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂತಹ ಹೆಚ್ ನಾಗೇಶ್ ಗೆ ಡಾ.ಅಂಬೇಡ್ಕರ್ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ನಾನ್ ಮಾಡಿದ್ದಾದ್ರೂ ಏನು..? ಯಾಕೆ ನನಗೆ ಮೋಸ ಮಾಡಿದ್ರೆ ಎಂಬುದಾಗಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತ ಸಂದರ್ಭದಲ್ಲಿ ಹೆಚ್ ನಾಗೇಶ್ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದರು. ಇಂತಹ ಹೆಚ್ ನಾಗೇಶ್ ಅವರನ್ನು ಸಮಾಧಾನ ಮಾಡುವ ಸಲುವಾಗಿ ಸಿಎಂ ಯಡಿಯೂರಪ್ಪ ಅವರು, ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದಾರೆ.

ಇದೀಗ ಹೆಚ್ ನಾಗೇಶ್ ಅವರನ್ನು ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ. ಈ ಮೂಲ ಹೆಚ್ ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನ ಮಾನ ನೀಡಿ, ಸಮಾಧಾನ ಮಾಡುವ ಕೆಲಸವನ್ನು ಸಿಎಂ ಯಡಿಯೂರಪ್ಪ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ