Breaking News

ಬೆಳಗಾವಿ: ₹14.74 ಕೋಟಿ ತೆರಿಗೆ ವಂಚನೆ ಬಯಲಿಗೆ

Spread the love

ಬೆಳಗಾವಿ: ಜಿಎಸ್‌ಟಿ ಪಾವತಿ ವಿಷಯದಲ್ಲಿ ₹ 14.74 ಕೋಟಿ ತೆರಿಗೆ ವಂಚಿಸಿದ ಆರೋಪದ ಮೇಲೆ ಸುವರ್ಣ ಬಿಲ್ಡ್‌ಕಾನ್‌ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಮನೋಜಕುಮಾರ್ ಪ್ರನ್ನಾಥ್ ಅಬ್ರೋಲ್ ಎನ್ನುವವರನ್ನು ಜಿಎಸ್‌ಟಿ ನಿರ್ದೇಶನಾಲಯದ ಜಾಗೃತ ದಳವು ಬೆಳಗಾವಿಯಲ್ಲಿ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

‘ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಆರೋಪಿಯನ್ನು ಜ. 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಂಗಳೂರಿನ ಆ ಕಂಪನಿಯು ಪುಣೆಯಲ್ಲಿ ಕಾರ್ಪೊರೇಟ್ ಕಚೇರಿ ಹೊಂದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಜಿಎಸ್‌ಟಿ ನೋಂದಾಯಿಸಿದೆ. ರಸ್ತೆ ನಿರ್ಮಾಣ, ನೀರಾವರಿ ಮೊದಲಾದ ಯೋಜನೆಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ಬೆಳಗಾವಿಯ ಜಿಎಸ್‌ಟಿ ಜಾಗೃತ ದಳದ ಅಧಿಕಾರಿಗಳು ಅದರ ಕಾರ್ಯನಿರ್ವಹಣೆ, ತೆರಿಗೆ ವಹಿವಾಟು, ಪಾವತಿ ಬಗ್ಗೆ ವಿಚಾರಣೆ ನಡೆಸಿದಾಗ ತರಿಗೆ ವಂಚನೆಯ ವಿಷಯ ತಿಳಿದುಬಂದಿದೆ’ ಎಂದು ಜಿಎಸ್‌ಟಿ ಜಾಗೃತ ದಳದ ಪ್ರಧಾನ ಹೆಚ್ಚುವರಿ ನಿರ್ದೇಶಕ ಜೇನ್ ಕರುಣ ನಾಥನೆಲ್ ತಿಳಿಸಿದ್ದಾರೆ.

’11 ಬೋಗಸ್ ಸರಬರಾಜುದಾರರು ಕಂಪನಿಗೆ ನಕಲಿ ಇನ್‌ವಾಯ್ಸ್‌ಗಳನ್ನು ನೀಡಿ ತೆರಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಎರಡು ತಿಂಗಳಿಂದ ವಿಶೇಷ ಕಾರ್ಯಾಚರಣೆ ನಡೆಸಿ, ಇತರ 22 ಪ್ರಕರಣಗಳಲ್ಲಿ ₹ 77 ಕೋಟಿ ತೆರಿಗೆ ವಂಚಿಸಿರುವುದನ್ನು ಪತ್ತೆ ಹಚ್ಚಲಾಗಿದೆ. ₹ 12.5 ಕೋಟಿ ಸಂಗ್ರಹಿಸಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸುವರ್ಣಸೌಧದ ಮುಂದೆ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರಧ್ವಜ ಅನಾವರಣ

Spread the loveಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ