ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾಣ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹೈಕಮಾಂಡ್ ಗೆ ದೂರು ನೀಡಲು ಇಂದು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ 8.20 ರ ಸುಮಾರಿಗೆ ಶಾಸಕ ರೇಣುಕಾಚಾರ್ಯ ಅವರು ದೆಹಲಿಗೆ ಪ್ರಯಾಣ ಬೆಳಸಲಿದ್ದು, ಹೈಕಮಾಂಡ್ ಗೆ ದೂರು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಎಂಎಲ್ ಸಿಗಳಿಗೆ ಸಚಿವ ಸ್ಥಾನ ನೀಡಿದ್ದಾರೆ. ಗೆದ್ದವರನ್ನು ಬಿಟ್ಟು ಸೋತವರನ್ನು ಮಂತ್ರಿ ಮಾಡಿರುವುದಕ್ಕೆ ರೇಣುಕಾಚಾರ್ಯ ಮುನಿಸಿಕೊಂಡಿದ್ದು, ಇಂದು ಬೆಳಗ್ಗೆ 8.20 ರ ಸುಮಾರಿಗೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಿಲಿದ್ದಾರೆ ಎನ್ನಲಾಗಿದೆ.