ರಾಯಚೂರು : ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರ ಬಳಿ ಸಿಡಿ ಇದೆ. ಸಂಕ್ರಾಂತಿ ಬಳಿಕ ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ ಮಾಡ್ತಾರೆ ಎಂಬುದಾಗಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಎಂ.ಎಲ್.ಸಿ ಹೆಚ್.ವಿಶ್ವನಾಥ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿ ಸಿಡಿ ಇದೆ. ಸಂಕ್ರಾಂತಿ ಬಳಿಕ ಸಿಡಿ ಬಿಡುಗಡೆ ಆಗುತ್ತೆ. ಯತ್ನಾಳ್ ಸೇರಿ ಹಲವರ ಬಳಿ ಸಿಡಿ ಇದೆ. ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ ಮಾಡ್ತಾರೆ ಎಂಬುದಾಹಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.