Breaking News

ಕೃಷಿಕಾಯ್ದೆಯ ಸಮಿತಿಯಿಂದ ಹೊರಬಂದ ಭೂಪಿಂದರ್ ಸಿಂಗ್ ಮಾನ್

Spread the love

ನವದೆಹಲಿ: ಕೃಷಿ ಕಾಯ್ದೆಯ ಹಿನ್ನೆಲೆಯಲ್ಲಿ ಉಂಟಾಗಿರುವ ರೈತರ ಹಾಗೂ ಕೇಂದ್ರದ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಾಲ್ಕು ಜನರ ಕಮಿಟಿಯಿಂದ ಹೊರಬರುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಭೂಪಿಂದರ್ ಸಿಂಗ್ ಮಾನ್ ತಿಳಿಸಿದ್ದಾರೆ.

ಈ ಸಮಿತಿಯಲ್ಲಿನ ಸದಸ್ಯರು ಈ ಹಿಂದೆ ಕೇಂದ್ರದ ಕೃಷಿ ಕಾಯ್ದೆಯನ್ನು ಸ್ವಾಗತಿಸಿದ್ದರು ಎಂದು ರೈತ ಸಂಘಟನೆಗಳು ಹಾಗೂ ವಿರೋಧಪಕ್ಷಗಳು ಆರೋಪಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

 

ಈ ಕುರಿತಾಗಿ ಮಾಹಿತಿ ನೀಡಿರುವ ಭೂಪಿಂದರ್ ಸಿಂಗ್ ಮಾನ್, ನನ್ನನ್ನು ನಾಮನಿರ್ದೇಶನ ಮಾಡಿದ್ದಕ್ಕೆ ಸಮೀತಿಗೆ ನಾನು ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ. ಆದರೆ ನಾನು ರೈತರ ಹಿತಾಸಕ್ತಿಗಾಗಿ ನನ್ನ ಯಾವ ಹುದ್ದೆಯ ಸ್ಥಾನವನ್ನಾದರೂ ತ್ಯಾಗ ಮಾಡಲು ಸಿದ್ಧನಾಗಿದ್ದೇನೆ. ರೈತ ಸಂಘಟನೆ ಹಾಗೂ ವಿರೋಧ ಪಕ್ಷಗಳಲ್ಲಿ ಮೂಡಿರುವ ಅನುಮಾನಗಳನ್ನು ನಿವಾರಿಸಲು ನಾನು ಈ ನಿರ್ಧಾರವನ್ನು ಕೈಗೊಂಡಿದ್ದೇನೆ. ನಾನು ಸದಾ ಪಂಜಾಬ್ ಹಾಗೂ ದೇಶದ ರೈತರ ಜೊತೆಯಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

 

ಇತ್ತೀಚೆಗೆ ಸುಪ್ರೀಂ ಕೋರ್ಟ್ ದೇಶದಲ್ಲಿ ನೂತನ ಕೃಷಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ರೈತ ಚಳುವಳಿಯ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳ ಜಾರಿಗೆ ಮುಂದಿನ ಆದೇಶದವರೆಗೂ ತಡೆ ನೀಡಿದ್ದು, ಸರ್ಕಾರದ ಅಭಿಪ್ರಾಯಗಳನ್ನು ಒಳಗೊಂಡಂತೆ ರೈತರ ಸಲಹೆ ಸೂಚನೆಗಳನ್ನು ಆಲಿಸಲು ನಾಲ್ಕು ಜನ ಸದಸ್ಯರನ್ನು ಒಳಗೊಂಡಿರುವ ಸಮಿತಿಯೊಂದನ್ನು ನೇಮಿಸಿತ್ತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ