Breaking News
Home / Uncategorized / ರಾಜ್ಯ ರಾಜಕೀಯದಲ್ಲಿ ಯತ್ನಾಳ್​ ಸಿಡಿಸಿದ ಸಿಡಿ ಸ್ಫೋಟ; ಬಹಿರಂಗ ಹೇಳಿಕೆ ನೀಡದಂತೆ ಎಲ್ಲಾ ನಾಯಕರುಗಳಿಗೆ ಬಿಜೆಪಿ ಸೂಚನೆ

ರಾಜ್ಯ ರಾಜಕೀಯದಲ್ಲಿ ಯತ್ನಾಳ್​ ಸಿಡಿಸಿದ ಸಿಡಿ ಸ್ಫೋಟ; ಬಹಿರಂಗ ಹೇಳಿಕೆ ನೀಡದಂತೆ ಎಲ್ಲಾ ನಾಯಕರುಗಳಿಗೆ ಬಿಜೆಪಿ ಸೂಚನೆ

Spread the love

ಬೆಂಗಳೂರು (ಜನವರಿ 15); ಬಿಜೆಪಿ ಪಕ್ಷದೊಳಗೆ ಕಳೆದ ಕೆಲ ದಿನಗಳಿಂದ ಒಳಬೇಗುದಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಮಾತನಾಡುವವರ ಸಂಖ್ಯೆಯೂ ಏರುತ್ತಲೇ ಇದೆ. ಈ ನಡುವೆ ಗುರುವಾರ ಹೊಸ ಬಾಂಬ್ ಸಿಡಿಸಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​, “ಕಣ್ಣಿನಿಂದ ನೋಡಲಾಗದಂತಹ ಸಿಡಿ ಇದೆ. ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಆ ಸಿಡಿಯನ್ನು ಮಾಡಿದ್ದೇ ಅವರ ಮೊಮ್ಮಗ. ಹಿಂದೆ ಇದ್ದದ್ದೇ ಆ ಸಿಡಿ, ಯಾರೊಂದಿಗೆ ಇದೆ ಅಂತ ತಮಗೆಲ್ಲಾ ಅದು ಗೊತ್ತೇ ಇದೆ. ನಾನು ಆ ಬಗ್ಗೆ ಏನು ಹೇಳಬೇಕಿಲ್ಲ. ಈ ಸಿಡಿಯನ್ನು ಮುಂದಿಟ್ಟು ಯಡಿಯೂರಪ್ಪನವರನ್ನು ಬ್ಲ್ಯಾಕ್​ಮೇಲ್ ಮಾಡಿ ಹಲವರು ಸಚಿವರಾಗುತ್ತಿದ್ದಾರೆ” ಎಂದು ಆರೋಪಿಸಿದ್ದರು. ಇದರ ಬೆನ್ನಿಗೆ ರಾಜ್ಯ ರಾಜಕೀಯದಲ್ಲಿ ಸಿಡಿ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದಾಗುತ್ತಿದ್ದು, ಡ್ಯಾಮೇಜ್​ ಕಂಟ್ರೋಲ್​ಗೆ ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್​ ಈ ಕುರಿತು ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಎಲ್ಲಾ ಶಾಸಕರಿಗೂ ಎಚ್ಚರಿಕೆ ನೀಡಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ಹಲವು ದಿನಗಳಿಂದ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಕಿಡಿಕಾರುತ್ತಲೇ ಇದ್ದಾರೆ. ಬಿಎಸ್​ವೈ ಹಾಗೂ ಯತ್ನಾಳ್​ ಜಟಾಪಟಿ ಪಕ್ಷದ ಮುಜುಗುರಕ್ಕೂ ಕಾರಣವಾಗಿದೆ. ಆದರೆ, ಗುರುವಾರ ಮತ್ತೂ ಒಂದು ಹೆಜ್ಜೆ ಮುಂದಿಟ್ಟಿದ್ದ ಯತ್ನಾಳ್, “ಕಣ್ಣಿನಿಂದ ನೋಡಲಾಗದ ಸಿಡಿ ಒಂದು ರಾಜ್ಯ ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಆ ಸಿಡಿಯನ್ನೇ ಮೂವರು ನನ್ನ ಬಳಿ ತೆಗೆದುಕೊಂಡು ಬಂದಿದ್ದರು. ಅದರಲ್ಲಿ ಇಬ್ಬರು ಈಗ ಸಚಿವರಾಗಿದ್ದಾರೆ.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ