Breaking News

ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು.

Spread the love

ನವದೆಹಲಿ: ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು. ಅಲ್ಲಿಯ ವರೆಗೆ ಕಾಂಗ್ರೆಸ್ ಪಟ್ಟು ಸಡಿಲಿಸುವುದಿಲ್ಲ. ಈ ಕಾಯ್ದೆಗಳು ರೈತರಿಗೆ ಯಾವುದೇ ನೆರವನ್ನುಂಟು ಮಾಡುವುದಿಲ್ಲ. ರೈತರನ್ನು ಮುಗಿಸಲೆಂದೇ ಕೃಷಿ ಕಾಯ್ದೆ ಜಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಜಾರಿ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪಕ್ಷವು ಶುಕ್ರವಾರ ‘ಕಿಸಾನ್ ಅಧಿಕಾರ್ ದಿವಸ್’ ಆಚರಿಸುತ್ತಿದೆ. ಅಲ್ಲದೆ ಎಲ್ಲ ರಾಜ್ಯ ಘಟಕಗಳ ರಾಜಭವನದಲ್ಲಿ ಧರಣಿಯನ್ನು ಹಮ್ಮಿಕೊಂಡಿದೆ. ಇದು ‘ಸ್ಪೀಕ್ ಅಪ್ ಫಾರ್ ಕಿಸಾನ್ ಅಧಿಕಾರ್’ (ರೈತರ ಅಧಿಕಾರಕ್ಕಾಗಿ ಧ್ವನಿಯೆತ್ತಿ) ಅಭಿಯಾನದ ಭಾಗವಾಗಿದೆ.

ಕಾಂಗ್ರೆಸ್ ಧರಣಿ ಮುನ್ನಡೆಸುತ್ತಿರುವ ರಾಹುಲ್ ಗಾಂಧಿ, ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವಂತೆ ಒತ್ತಾಯಿಸಿದರು.


Spread the love

About Laxminews 24x7

Check Also

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

Spread the loveನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ