Breaking News

BREAKING : ರಾಜ್ಯದಲ್ಲಿ ಮೊದಲ ‘ಕೊರೋನಾ ಲಸಿಕೆ’ ಪಡೆದ ‘ಡಿ.ಗ್ರೂಪ್ ನೌಕರ ಚಂದ್ರಶೇಖರ್’

Spread the love

ಬೆಂಗಳೂರು : ದೇಶಾದ್ಯಂತ ಇಂದಿನಿಂದ ಕೊರೋನಾ ಸೋಂಕಿನ ಲಸಿಕಾ ವಿತರಣೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ರಾಜ್ಯದಲ್ಲೂ ಲಸಿಕಾ ಅಭಿಯಾನ ಆರಂಭಗೊಂಡಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ನೀಡಿದೆ ಆರಂಭಗೊಂಡಿದ್ದು, ರಾಜ್ಯದಲ್ಲೇ ಮೊದಲ ಲಸಿಕೆಯನ್ನು ಕೆಸಿ ಜನರಲ್ ಆಸ್ಪತ್ರೆಯ ಡಿ.ಗ್ರೂಪ್ ನೌಕರ ಚಂದ್ರಶೇಖರ್ ಪಡೆಯುವ ಮೂಲಕ ಆರಂಭಗೊಂಡಿದೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತಿದೊಡ್ಡ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನ ನೀಡಿದ್ದಾರೆ. ಹೀಗೆ ಚಾಲನೆಗೊಂಡಂತ ಲಸಿಕೆಯ ಅಭಿಯಾನ ರಾಜ್ಯದಲ್ಲೂ ಶುರುವಾಗಿದೆ. ರಾಜ್ಯದಲ್ಲಿ ಮೊದಲ ಲಸಿಕಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದ್ದಾರೆ. ಈ ಬಳಿಕ ಕೆಸಿ ಜನರಲ್ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಮೊದಲ ಲಸಿಕೆ ನೀಡಿದೆ ಆರಂಭಗೊಂಡಿತು. ಕೆಸಿ ಜನರಲ್ ಆಸ್ಪತ್ರೆಯ ಡಿ.ಗ್ರೂಪ್ ನೌಕರ ಚಂದ್ರಶೇಖರ್ ಅವರಿಗೆ ಮೊದಲ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ.


Spread the love

About Laxminews 24x7

Check Also

ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ”

Spread the love“ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ