Breaking News
Home / ರಾಜ್ಯ / ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದ BSY

ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದ BSY

Spread the love

ಬೆಂಗಳೂರು: ಎರಡು ದಿನಗಳ ಕಾರ್ಯಕ್ರಮ ಮೇರೆಗೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಆತ್ಮೀಯವಾಗಿ ಬರಮಾಡಿಕೊಂಡರು.

ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಮಿತ್ ಶಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು, ಈ ವೇಳೆ ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ ಹಾಗೂ ಸಿ.ಟಿ ರವಿ ಮತ್ತಿತರು ಸಿಎಂಗೆ ಸಾಥ್ ನಿಡಿದರು.
ಎಚ್‍ಎಎಲ್ ಏರ್ ಪೋರ್ಟ್ ನಿಂದ ಶಾ ಅವರು ಮಧ್ಯಾಹ್ನದ ಊಟ ಮುಗಿಸಿ ಹೆಲಿಕಾಪ್ಟರ್ ನಲ್ಲಿ ಭದ್ರಾವತಿಗೆ ತೆರಳಿದ್ದಾರೆ. ಅಮಿತ್ ಷಾ ಜೊತೆ ವಿಶೇಷ ವಿಮಾನದಲ್ಲಿ ಸಿಎಂ, ಕೇಂದ್ರ ಸಚಿವರಾದ ಸದಾನಂದಗೌಡ ಹಾಗೂ ಪ್ರಹ್ಲಾದ್ ಜೋಷಿ ಕೂಡ ಭದ್ರಾವತಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ.


Spread the love

About Laxminews 24x7

Check Also

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Spread the love ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೇಲೆ ಭಾರತಕ್ಕೆ ಕಪ್ಪುಚುಕ್ಕೆಯಾಗಿರುವ ಪಾಕ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ