Breaking News

ರಾಮ ಮಂದಿರ ನಿರ್ಮಾಣಕ್ಕೆ ಆನಂದ್ ಸಿಂಗ್ ಕುಟುಂಬದಿಂದ ದೇಣಿಗೆ ಸಂಗ್ರಹ

Spread the love

ಬಳ್ಳಾರಿ: ರಾಮ ಮಂದಿರ ನಿರ್ಮಾಣಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಕುಟುಂಬದವರು ದೇಣಿಗೆ ಸಂಗ್ರಹ ಕಾರ್ಯವನ್ನು ಮಾಡುತ್ತಿದ್ದಾರೆ.
ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಸರ್ವರೂ ಸಮರ್ಪಣಾ ಭಾವದಿಂದ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಎಂದು ಆನಂದ್ ಸಿಂಗ್ ಮನವಿ ಮಾಡಿದ್ದಾರೆ. ಇಂದು ಬೆಳಗ್ಗಿನಿಂದಲೇ ಸಚಿವರು ಸೇರಿದಂತೆ ಅವರ ಸಂಪೂರ್ಣ ಕುಟುಂಬ ಸದಸ್ಯರು ಈ ಜಾಥಾದಲ್ಲಿ ಪಾಲ್ಗೊಂಡು ನಿಧಿ ಸಂಗ್ರಹಣೆ ಮಾಡಿದ್ದಾರೆ.
ನಗರದೆಲ್ಲೆಡೆ ದೇಣಿಗೆ ಸಂಗ್ರಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐತಿಹಾಸಿಕ ರಾಮ ಮಂದಿರ ನಿರ್ಮಾಣವಾಗುತ್ತಿರುವುದರ ಹಿಂದೆ ನೂರಾರು ವರ್ಷಗಳ ಕನಸು, ಲಕ್ಷಾಂತರ ಜನರ ತ್ಯಾಗ, ಬಲಿದಾನವಿದೆ. ಇದಕ್ಕಾಗಿ ಸರ್ವರೂ ತಮ್ಮ ಕೈಲಾದಷ್ಟು ದೇಣಿಗೆ ನೀಡುವ ಮೂಲಕ ಅವರ ಶ್ರಮಕ್ಕೆ ಗೌರವ ವಂದನೆ ಸಲ್ಲಿಸಬೇಕಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ