Breaking News

ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

Spread the love

ಬೆಳಗಾವಿ, ಜ.17- ನಗರದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪರಿಗಣಿಸದ ಅಮಿತ್ ಶಾ ಅವರ ಬೆಳಗಾವಿ ಆಗಮನವನ್ನು ವಿರೋಧಿಸಿ ರೈತರು ಬೆಳಿಗ್ಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆ ಬೆತ್ತಲೆ ಉರುಳು ಸೇವೆ ಮಾಡಿ ಗಾಂಧೀಜಿ ಭಾವಚಿತ್ರ ಇಟ್ಟುಕೊಂಡು ರಸ್ತೆ ತಡೆ ನಡೆಸುತ್ತಿದ್ದರು.ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ