Breaking News
Home / Uncategorized / ಮದುವೆ ಆಗಬೇಕಿದ್ದ ಯುವಕ ಮಸಣಕ್ಕೆ

ಮದುವೆ ಆಗಬೇಕಿದ್ದ ಯುವಕ ಮಸಣಕ್ಕೆ

Spread the love

ರಾಯಚೂರು: ಮದುವೆ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೊರಟಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಸ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬೈಕ್ ಸವಾರ ಹಾಗೂ ಆತನೊಂದಿಗಿದ್ದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನ ಮಸ್ಕಿ ತಾಲೂಕಿನ ಅಡವಿಭಾವಿ ಗ್ರಾಮದ ಅರುಣಾಕ್ಷಿ (22), ರಜಿಯಾ ಬೇಗಂ (22) ಹಾಗೂ ವಿರೇಶ್ (23) ಎಂದು ಗುರುತಿಸಲಾಗಿದೆ. ಅತೀ ವೇಗದಲ್ಲಿ ಬೈಕ್ ರೈಡ್ ಮಾಡಿದ್ದರಿಂದ ಅಪಘಾತ ಸಂಭವಿಸಿದೆ.ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುತ್ತಿದ್ದ ವೇಳೆ ಸಾರಿಗೆ ಬಸ್ ಡಿಪೋ ಹತ್ತಿರ ಘಟನೆ ನಡೆದಿದೆ. ಬೈಕ್ ಸವಾರ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ.


Spread the love

About Laxminews 24x7

Check Also

ನೀರಿಲ್ಲದಿದ್ದರೇನು..? ಬಿಯರ್ ಇದೆಯಲ್ಲ.. : ಬೆಂಗಳೂರಲ್ಲಿ ಬಿಯರ್‌ಗೆ ಫುಲ್ ಡಿಮ್ಯಾಂಡ್!

Spread the loveಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ಹೆಚ್ಚಾಗುತ್ತಿದ್ದು, ಬಿಯರ್‌ಗೂ ಬೇಡಿಕೆ ಹೆಚ್ಚಾಗಿದೆ. ಮದ್ಯಪ್ರಿಯರು ಹಾಟ್​ ಡ್ರಿಂಕ್ಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ