Breaking News

ರೈತ ಸಂಘಟನೆ – ಕೇಂದ್ರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ

Spread the love

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇದರ ಮಧ್ಯೆ ಇಂದು ನಡೆಯಬೇಕಾಗಿದ್ದ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಲಾಗಿದೆ. .

ಕೃಷಿ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಈಗಾಗಲೇ ನಡೆದಿರುವ ಎಲ್ಲ ಸಭೆಗಳು ವಿಫಲಗೊಂಡಿರುವ ಕಾರಣ ಇಂದು 10ನೇ ಸುತ್ತಿನ ಮಾತುಕತೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಇದನ್ನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

ನಾಳೆ ಮಧ್ಯಾಹ್ನ 2 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಯಲಿದ್ದು, ಬಿಕ್ಕಟ್ಟು ಇತ್ಯರ್ಥವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ