Breaking News

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು,ರೌಡಿ ಕಾಲಿಗೆ ಪೊಲೀಸರಿಂದ ಗುಂಡೇಟು

Spread the love

ಬೆಂಗಳೂರು (ಜ. 19): ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್ ಜೊತೆ ಗುರುತಿಸಿಕೊಂಡಿದ್ದ ಆರೋಪಿಯೊಬ್ಬನ ಮೇಲೆ ಕೊಲೆ ಪ್ರಯತ್ನದ ಆರೋಪವಿತ್ತು. ಆತನನ್ನು ಬಂಧಿಸಲು ಹೋದಾಗ ಇಂದು ಮುಂಜಾನೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ.  ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ 22 ವರ್ಷದ ಪ್ರವೀಣ್ ಕಾಲಿಗೆ ಪೀಣ್ಯ ಪೊಲೀಸ್ ಠಾಣೆ ಸಬ್​ ಇನ್​ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿದ್ದಾರೆ. ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ತಿಪ್ಪೇನಹಳ್ಳಿ ಬಳಿ ಈ ಘಟನೆ ನಡೆದಿದೆ. ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ಪೊಲೀಸರು ಇಂದು ಮುಂಜಾನೆ ತೆರಳಿದ್ದರು. ತಿಪ್ಪೇನಹಳ್ಳಿಯ ಬಳಿ ಆರೋಪಿಯಿದ್ದು, ಆತನನ್ನು ಬಂಧಿಸಲು ತೆರಳಿದಾಗ ಹೆಡ್ ಕಾನ್​ಸ್ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಪ್ರವೀಣ್ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ.

ಈ ವೇಳೆ ಆತ್ಮರಕ್ಷಣೆಗೆ ಆರೋಪಿ ಪ್ರವೀಣ್ ಕಾಲಿಗೆ ಗುಂಡು ಹಾರಿಸಿದ ಸಬ್​ ಇನ್​ಸ್ಪೆಕ್ಟರ್ ಆತನನ್ನು ಬಂಧಿಸಿದ್ದಾರೆ. ರಾಜಗೋಪಾಲನಗರ, ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ವಿರುದ್ಧ ಹಲ್ಲೆ, ಡಕಾಯಿತಿ ಕೇಸ್​ಗಳು ದಾಖಲಾಗಿವೆ. ರೌಡಿಶೀಟರ್ ಅನಿಲ್ ಜೊತೆ ಗುರುತಿಸಿಕೊಂಡಿದ್ದ ಆರೋಪಿ ಪ್ರವೀಣ್ ಇದೀಗ ಗುಂಡೇಟಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.


Spread the love

About Laxminews 24x7

Check Also

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ.

Spread the loveಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಘಟನೆ. ಜಿಲ್ಲಾಧಿಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ