Breaking News

ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ: ಡಿ.ವಿ.ಸದಾನಂದ ಗೌಡ

Spread the love

ಮಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಎಚ್ಚರಿಸಿದ್ದಾರೆ.

ಪುತ್ತೂರಿನಲ್ಲಿ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ಸಂದರ್ಭದಲ್ಲೂ ಯತ್ನಾಳ್ ಇದೇ ರೀತಿ ಹೇಳಿಕೆ ನೀಡುತ್ತಿದ್ದರು. ಹಲವು ಎಚ್ಚರಿಕೆಯ ಬಳಿಕವೂ ಅವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದ ಕಾರಣ ನಾನೇ ಅವರನ್ನು 6 ವರ್ಷ ಪಕ್ಷದಿಂದ ಉಚ್ಛಾಟಿಸಿದ್ದೆ. ಇದೀಗ ಮತ್ತೆ ಅವರು ಅಂಥದ್ದೇ ವರ್ತನೆ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೈಯಕ್ತಿವಾಗಿ ಯತ್ನಾಳ್ ಬಗ್ಗೆ ದ್ವೇಷವಿಲ್ಲ. ಆದರೆ ಅವರ ನಡವಳಿಗೆ ಬಗ್ಗೆ ಹೇಳುತ್ತೇನೆ. ಸಚಿವ ಸ್ಥಾನಕ್ಕಾಗಿ ಅವರು ಈ ರೀತಿ ಮಾತನಾಡುತ್ತಿದ್ದಾರೆ. ಅಲ್ಲದೆ ಅವರನ್ನು ಕರೆದು ಮಾತನಾಡಬೇಕೆಂದು ಈ ರೀತಿ ವರ್ತಿಸುತ್ತಿದ್ದಾರೆ. ಅವರನ್ನು ಸಮಾಧಾನ ಮಾಡುವ ಪ್ರಶ್ನೆಯೇ ಇಲ್ಲ. ಇನ್ನೊಮ್ಮೆ ಯತ್ನಾಳ್ ಮಾತನಾಡಿದರೆ ಕೇಂದ್ರ ನಾಯಕರು ಕ್ರಮ ಕೈಗೊಳ್ಳುತ್ತಾರೆ ಎಂದರು.
ವೈಯಕ್ತಿವಾಗಿ ಯತ್ನಾಳ್ ಬಗ್ಗೆ ದ್ವೇಷವಿಲ್ಲ. ಆದರೆ ಅವರ ನಡವಳಿಗೆ ಬಗ್ಗೆ ಹೇಳುತ್ತೇನೆ. ಸಚಿವ ಸ್ಥಾನಕ್ಕಾಗಿ ಅವರು ಈ ರೀತಿ ಮಾತನಾಡುತ್ತಿದ್ದಾರೆ. ಅಲ್ಲದೆ ಅವರನ್ನು ಕರೆದು ಮಾತನಾಡಬೇಕೆಂದು ಈ ರೀತಿ ವರ್ತಿಸುತ್ತಿದ್ದಾರೆ. ಅವರನ್ನು ಸಮಾಧಾನ ಮಾಡುವ ಪ್ರಶ್ನೆಯೇ ಇಲ್ಲ. ಇನ್ನೊಮ್ಮೆ ಯತ್ನಾಳ್ ಮಾತನಾಡಿದರೆ ಕೇಂದ್ರ ನಾಯಕರು ಕ್ರಮ ಕೈಗೊಳ್ಳುತ್ತಾರೆ ಎಂದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ