Breaking News

ಬೆಳಗಾವಿಯಲ್ಲೂ ಲಾಕ್ ಡೌನ್ :ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹ…..

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತಲಿದ್ದು, ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕನಿಷ್ಠ ಒಂದು ತಿಂಗಳು ಲಾಕ್ ಡೌನ್ ಜಾರಿ ಮಾಡುವಂತೆ   ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹಿಸಿದೆ.

ಈ ವಿಚಾರವಾಗಿ ಗುರುವಾರ ಜಿಲ್ಲಾಧಿಕಾರಿ ಎಂ.ಜಿ. ಹೀರೇಮಠ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಮನವಿ ಸಲ್ಲಿಸಿದೆ.

ಬೆಳಗಾವಿ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಹೀಗಾಗಿ ಬೆಳಗಾವಿಯಲ್ಲಿಯೂ ಲಾಕ್ ಡೌನ್ ಜಾರಿ ಮಾಡುವಂತೆ ಒತ್ತಾಯಿಸಿದ್ರು.

ಈ ಸಂದರ್ಭದಲ್ಲಿ  ವಕೀಲರಾದ   ನಿತಿನ್ ಬಾಳ ಬಂಡಿ,  ಶ್ವೇತಾ ಕುಲಕರ್ಣಿ,  ಸುಜಿತ್ ಮುಳಗುಂದ ಮನವಿ ನೀಡಿದ್ದಾರೆ .

ಈಗಾಗಲೇ ಜಿಲ್ಲೆಯಲ್ಲಿ ಅಥಣಿ, ಗೋಕಾಕ ಸೇರಿ ಐದು ತಾಲೂಕುಗಳಲ್ಲಿ ಒಂದು ವಾರದವರೆಗೆ ಲಾಕ್ ಡೌನ್ ಜಾರಿ ಮಾಡಲಾಗಿದೆ.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ