Breaking News
Home / ಜಿಲ್ಲೆ / ಬೆಳಗಾವಿ / ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ.

Spread the love

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್‌ ಮತ್ತೆ ಉದ್ಧಟತನ ಮೆರೆಯುತ್ತಿದ್ದು, ಪಾಲಿಕೆ ಮುಂದೆ ಹಾರಿಸಿರುವ ಕನ್ನಡ ಧ್ವಜಾವನ್ನ ತೆರವುಗೊಳಿಸಿ, ಭಗವ ಧ್ವಜಾ ಹಾರಿಸುತ್ತೇವೆ ಎಂದು ಕ್ಯಾತೆ ತೆಗೆದಿದ್ದಾರೆ. ಹಾಗಾಗಿ ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಪುಂಡರನ್ನ ಪೊಲೀಸರು ತಡೆದಿದ್ದಾರೆ.

ಬೆಳಗಾಮಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗುತ್ತಿದ್ದು, ಶಿವಸೇನಾ ಪುಂಡರನ್ನ ಬೆಳಗಾವಿ ಗಡಿ ಪ್ರವೇಶಿಸದಂತೆ ಪೊಲೀಸರು ತಡೆಯಿಡಿದ್ದಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯ ಪಾಲಿಕೆ ಮುಂದೆ ಭಗವಾ ಧ್ವಜಸ್ತಂಭ ನೆಡುವುದಾಗಿ ಹೇಳಿ ಗಡಿ ಪ್ರವೇಶಿಸಲು ಯತ್ನಿಸಿದ್ದಲ್ಲದೇ ನಾಡದ್ರೋಹಿ ಘೋಷಣೆಗಳನ್ನು ಕೂಗಿದ್ದಾರೆ.

ಶಿವಸೇನೆ ಕಾರ್ಯಕರ್ತರ ಪುಂಡಾಟ ತಡೆಯಲು ಮುಂದಾದ ಪೊಲೀಸರ ಮೇಲೆಯೇ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಗಡಿ ಭಾಗದಲ್ಲಿ ಪೊಲೀಸರು ಶಿವಸೇನೆ ಕಾರ್ಯಕರ್ತರ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಇದರಿಂದ ರೊಚ್ಚಿಗೆದ್ದ ಶಿವಸೇನೆ ಕಾರ್ಯಕರ್ತರು, ಪೊಲೀಸರೊಂದಿಗೆ ವಾಗ್ವಾದಕ್ಕಿಳುದು, ಪೊಲೀಸರನ್ನೇ ತಳ್ಳಿ ಮುನ್ನುಗ್ಗಲು ಯತ್ನಿಸಿದ್ದಾರೆ.

ಪೊಲೀಸರು ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದ್ದು, ಬೆಳಗಾವಿಯಲ್ಲಿ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ