ಬೆಂಗಳೂರು : ಬೆಳಗಾವಿಯಲ್ಲಿ ಭಗವಾ ಧ್ವಜ ಸ್ತಂಭ ನೆಡಲು ಶಿವಸೇನೆ ಯತ್ನಿಸಿದ್ದು ಖಂಡನೀಯ. ಇದಕ್ಕೆಲ್ಲಾ ಕಾರಣ ಬೆಳಗಾವಿ ಜಿಲ್ಲೆ ರಾಜಕಾರಣಿಗಳು. ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸುವಂತೆ ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನ ನಡೆಸುವುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸಬೇಕು. ಇದಕ್ಕೆಲ್ಲಾ ಬೆಳಗಾವಿ ಜಿಲ್ಲೆ ರಾಜಕಾರಣಿಗಳೇ ಕಾರಣ. ಶಿವಸೇನೆಯ ಪುಂಡಾಟ ವಿರೋಧಿಸಿ ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ನಾಡಿದ್ದು ಬೆಳಗಾವಿಗೆ ಹೋಗಿ, ಪ್ರತಿಭಟನೆ ನಡೆಸುತ್ತೇನೆ ಎಂದರು.