Breaking News

ಶಿವಸೇನೆ ಪುಂಡಾಟ ಸಹಿಸೋಲ್ಲ, : ಸಚಿವೆ ಶಶಿಕಲಾ ಜೊಲ್ಲೆ

Spread the love

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್‌ ಮತ್ತೆ ಉದ್ಧಟತನ ಮೆರೆಯುತ್ತಿದ್ದು, ಪಾಲಿಕೆ ಮುಂದೆ ಭಗವ ಧ್ವಜಾ ಹಾರಿಸುತ್ತೇವೆ ಎಂದು ಕ್ಯಾತೆ ತೆಗೆದಿದ್ದಾರೆ. ಮಹಾರಾಷ್ಟ್ರದಿಂದ ಶಿವಸೇನೆ ಪುಂಡರು ಬೆಳಗಾವಿ ಗಡಿ ಪ್ರವೇಶಿಸಲು ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ.

ಇನ್ನು ಶಿವಸೇನೆ ಪುಂಡರನ್ನ ತಡೆ ಹಿಡದ ಕರ್ನಾಟಕ ಪೊಲೀಸರು ಲಾಠಿ ಚಾರ್ಜ್‌ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಬಗ್ಗೆ ಬೆಳಗಾವಿ ಪ್ರತಿನಿಧಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಸಿದ್ದು, ಶಿವಸೇನೆ ಪುಂಡರ ಪುಂಡಾಟ ಇನ್ನು ಸಹಿಸೋಕೆ ಆಗೋದಿಲ್ಲ, ಕೈಕೊಟ್ಟು ಕೂಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇನ್ನು ಬೆಳಗಾವಿಯಲ್ಲಿ ಅಹಿತಕರ ಘಟನೆ ಸೃಷ್ಟಿಸಲು ಬಂದರೇ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೀವೆ ಎಂದಿರುವ ಅವ್ರು, ಸ್ವತಃ ತಾವೇ ಗಡಿ ಬಳಿ ಹೋಗಿ ಶಿವಸೇನೆ ಕಾರ್ಯಕರ್ತರನ್ನ ತೆರವುಗೊಳಿಸುವ ಕಾರ್ಯ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

15 ದಿನದ ಮಗುವಿಗೆ ತಂದೆ ವಿಷಪ್ರಾಶನ ?: ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ತಾಯಿ

Spread the loveಬೆಳಗಾವಿ: ಪ್ರಪಂಚವನ್ನೇ ಕಾಣದ 15 ದಿನದ ಮಗುವಿಗೆ ಪಾಪಿ ತಂದಯೇ ವಿಷಪ್ರಾಶನ ಮಾಡಿದ್ದಾನೆ ಎಂದು ಹೆತ್ತ ತಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ