ಸ್ಟಾರ್ ನಟರ ಚಿತ್ರಗಳು ಒಂದೊಂದೆ ಬಿಡುಗಡೆ ದಿನಾಂಕ ಘೋಷಿಸಿದೆ. ಸ್ಯಾಂಡಲ್ವುಡ್ನಲ್ಲಿ ಇನ್ನು ಎರಡು ತಿಂಗಳು ಸ್ಟಾರ್ ನಟರ ಅಬ್ಬರ ಜೋರಾಗಿರಲಿದೆ. ಈ ಗ್ಯಾಪ್ನಲ್ಲಿ ಹೊಸಬರ ಸಿನಿಮಾಗಳು ತೆರೆಗೆ ಬರುವುದು ಸ್ವಲ್ಪ ಮಟ್ಟಿಗೆ ಕಷ್ಟ ಎನ್ನಬಹುದು.
ಬಹುಶಃ ಅದಕ್ಕಾಗಿಯೇ ಈ ವಾರ ಐದು ಕನ್ನಡ ಸಿನಿಮಾ ಚಿತ್ರಮಂದಿರಕ್ಕೆ ಬರ್ತಿದೆ. ಜನವರಿ 22 ರಂದು ಐದು ಕನ್ನಡ ಸಿನಿಮಾ ಥಿಯೇಟರ್ಗೆ ಬರ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
‘ತಲಾಖ್ ತಲಾಖ್ ತಲಾಖ್ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಆರ್ಜೆ ನೇತ್ರಾ, ಸುಚೇತನ್ ಸ್ವರೂಪ್, ಶ್ರೀನಿವಾಸ್ ಮೂರ್ತಿ, ರವಿ ಭಟ್, ವೀಣಾ ಸುಂದರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರಶಾಂತ್ ಸಿದ್ದಿ, ದಿವಂಗತ ನಟ ರಾಕ್ಲೈನ್ ಸುಧಾಕರ್, ಶಿವಮೊಗ್ಗ ಸಂತೋಷ್, ಮೇಘಶ್ರೀ ನಟನೆಯ ‘ಪಂಟ್ರು’ ಸಿನಿಮಾ ಈ ವಾರವೇ ಬಿಡುಗಡೆಯಾಗುತ್ತಿದೆ. ಮಿಲನ್ ಧನು ಈ ಚಿತ್ರ ನಿರ್ದೇಶಿಸಿದ್ದಾರೆ.
ಬಿಂದುಶ್ರೀ, ಪವಿತ್ರಾ, ಹರೀಶ್, ಸಮೀರ್ ನಾಗ್ ಹಾಗೂ ರಾಕ್ಲೈನ್ ಸುಧಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಲಡ್ಡು’ ಚಿತ್ರವೂ ಇದೇ ವಾರ ಪ್ರೇಕ್ಷಕರ ಮುಂದೆ ಬರ್ತಿದೆ. ರಾಮಾನಂದ್ ಈ ಚಿತ್ರ ನಿರ್ದೇಶಿಸಿದ್ದಾರೆ.
ರಾಜು ದೇವಸಂದ್ರ ನಿರ್ದೇಶನದ ‘ಕತ್ಲೆಕಾಡು’ ಸಿನಿಮಾನೂ ಇದೇ ವಾರ ರಿಲೀಸ್ ಆಗುತ್ತಿದೆ. ಶಿವಾಜಿನಗರ ಲಾಲ್, ಸಂಜೀವ್, ಸಿಂಧು ರಾವ್, ಸಂಹಿತಾ ಶಾ, ಸಿಂಚನಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಜೊತೆಗೆ ‘ರಾಜಮಾರ್ಗ’ ಎನ್ನುವ ಚಿತ್ರವೂ ಬಿಡುಗಡೆಯಾಗುತ್ತಿದೆ.