Breaking News

ಅಬಕಾರಿ ಖಾತೆ ನಂಗೆ ಬೇಕಿಲ್ಲ: M.T.B.

Spread the love

ಬೆಂಗಳೂರು, ಜ.21- ಖಾತೆ ಹಂಚಿಕೆ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಬಕಾರಿ ಇಲಾಖೆ ನನಗೆ ಬೇಡ. ಅದರಲ್ಲಿ ಮಾಡುವ ಕೆಲಸ ಏನೂ ಇಲ್ಲ ಎಂದು ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಸಿಎಂ ಉತ್ತಮ ಖಾತೆ ನೀಡುವ ಭರವಸೆ ನೀಡಿದ್ದರು. ಆದರೆ, ಈಗ ಅಬಕಾರಿ ಖಾತೆ ನೀಡಿದ್ದಾರೆ. ನನಗೆ ಈ ಖಾತೆ ಬೇಡ ಎಂದು ಹೇಳಿಬಂದಿದ್ದೇನೆ.

ಅಬಕಾರಿಯಲ್ಲಿ ಮಾಡುವ ಕೆಲಸ ಏನಿದೆ? ವಸತಿ ಖಾತೆಯಲ್ಲೇ ಆದರೆ ಮನೆಗಳನ್ನು ಕೊಡುವುದು, ಕಾಮಗಾರಿ ಮಾಡುವುದು ಇತ್ತು. ಈಗ ಅಬಕಾರಿ ಖಾತೆ ನೀಡಿದ್ದಾರೆ.ಇದು ನಾನು ಮಾಡುವ ಕೆಲಸ ಅಲ್ಲ , ಈ ಖಾತೆ ಬೇಡ ಎಂದು ಹೇಳಿಬಂದಿದ್ದೇನೆ ಎಂದು ತಿಳಿಸಿದ್ದಾರೆ


Spread the love

About Laxminews 24x7

Check Also

ಕೊಲ್ಹಾಪುರದಲ್ಲಿ ನಡೆದ ರಾಷ್ಟ್ರೀಯ ಸ್ಪರ್ಧೆಯಲ್ಲಿ ಬೆಳಗಾವಿಯ ಕರಾಟೆಪಟುಗಳ ಅದ್ಭುತ ಸಾಧನೆ

Spread the love ಕೊಲ್ಹಾಪುರದಲ್ಲಿ ನಡೆದ ರಾಷ್ಟ್ರೀಯ ಸ್ಪರ್ಧೆಯಲ್ಲಿ ಬೆಳಗಾವಿಯ ಕರಾಟೆಪಟುಗಳ ಅದ್ಭುತ ಸಾಧನೆ ೧೦೪ ಪದಕಗಳನ್ನು ಗೆದ್ದ ೫೭ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ