Breaking News

ಭಾನುವಾರ ರಾಜ್ಯಾದ್ಯಂತ ನಡೆಯಬೇಕಿದ್ದ F.D..A.ಪರೀಕ್ಷೆ ಮುಂದೂಡಿಕೆ

Spread the love

ಬೆಂಗಳೂರು – ರಾಜ್ಯಾದ್ಯಂತ ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಹಠಾತ್ ಮಂದೂಡಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ನಡೆಸಬೇಕಿತ್ತು. ರಾಜ್ಯದಲ್ಲಿ 1100 ಪೋಸ್ಟ್ ಗಳಿಗಾಗಿ ಸುಮಾರು 3.74 ಲಕ್ಷ ಜನರು ಪರೀಕ್ಷೆ ಬರೆಯಬೇಕಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಹಠಾತ್ ಮುಂದೂಡಲಾಗಿದೆ.

ಬೆಂಗಳೂರು ಪೊಲೀಸರು 6 ಜನರನ್ನು ಬಂಧಿಸಿದ್ದು, ಸುಮಾರು 6 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

ಲೋಕಸೇವಾ ಆಯೋಗ ಪ್ರಕಟಣೆ ನೀಡಿದ್ದು ಅನಿವಾರ್ಯ ಕಾರಣದಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ತಿಳಿಸಿದೆ.

ಮುಂದಿನ ದಿನಾಂಕ ಇನ್ನಷ್ಟೆ ಪ್ರಕಟಿಸಬೇಕಿದೆ.


Spread the love

About Laxminews 24x7

Check Also

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Spread the loveಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ  ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ