Breaking News

ಮಂಗಳೂರು ಬ್ರಾಂಡ್ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ

Spread the love

ಮಂಗಳೂರು, – ಮಂಗಳೂರಿನ ಬ್ರಾಂಡ್ ಹಾಳಾಗುವಂತಹ ದುಷ್ಕøತ್ಯ ನಡೆಸುವವರ ಬಗ್ಗೆ ಮಾಹಿತಿ ನೀಡುವಂತೆ ಮಂಗಳೂರಿನ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಂಗಳೂರು ಸುಂದರ ನಗರ. ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಇಲ್ಲಿಗೆ ಹಲವಾರು ಮಂದಿ ಬರುತ್ತಾರೆ. ಮಂಗಳೂರಿಗೆ ಒಂದು ಬ್ರಾಂಡ್ ಇದೆ. ಅದನ್ನು ಹಾಳು ಮಾಡುವಂತೆ ಇತ್ತೀಚೆಗೆ ಕೆಲ ಕೃತ್ಯಗಳು ನಡೆಯುತ್ತಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆಕೆಲವು ವ್ಯಕ್ತಿಗಳು ಧಾರ್ಮಿಕ ಕೇಂದ್ರಗಳಿಗೆ ಆಕ್ಷೇಪಾರ್ಹ ವಸ್ತುಗಳನ್ನು ಎಸೆದು ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ 4-5 ಪ್ರಕರಣಗಳು ವರದಿಯಾಗಿದ್ದು, ಕೇಸು ದಾಖಲಿಸಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದೇವೆ. ಈ ಕೃತ್ಯಗಳಿಂದ ಮಂಗಳೂರಿನ ಬ್ರಾಂಡ್ ಹಾಳಾಗಲಿದೆ. ಅದಕ್ಕೆ ಅವಕಾಶ ನೀಡಬಾರದು ಎಂದಿದ್ದಾರೆ.


Spread the love

About Laxminews 24x7

Check Also

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

Spread the loveನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ