ನವದೆಹಲಿ,: 2021-22ನೇ ಸಾಲಿನ ಬಜೆಟ್ ಇದೇ ಮೊದಲ ಬಾರಿಗೆ ಕಾಗದರಹಿತವಾಗಿ ಮಂಡನೆಯಾಗುತ್ತಿದೆ. 2021ರ ಫೆಬ್ರವರಿ 1 ರಂದು ಆಯವ್ಯಯ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ವಿಶೇಷ ಮೊಬೈಲ್ ಆಪ್ಲಿಕೇಷನ್ ಹೊರ ತರಲಾಗಿದೆ.
ಡಿಜಿಟಲ್ ಆಡಳಿತದ ಅನುಕೂಲತೆಗಳನ್ನು ಬಳಸಿಕೊಂಡು ಸಂಸತ್ ಸದಸ್ಯರಿಗೆ ಮತ್ತು ಸಾಮಾನ್ಯ ಜನರಿಗೆ ಬಜೆಟ್ ನ ದಾಖಲೆಗಳು ತಾಕಲಾಟವಿಲ್ಲದೇ ಸುಗಮವಾಗಿ ದೊರಕಿಸಿಕೊಡಲು ”ಕೇಂದ್ರ ಬಜೆಟ್ ನ ಮೊಬೈಲ್ ಆಯಪ್ ” ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಡುಗಡೆ ಮಾಡಿದ್ದಾರೆ.