Breaking News

ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ

Spread the love

ಮೈಸೂರು: ನಮ್ಮ ಸದಸ್ಯರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌. ಕಾಂಗ್ರೆಸ್- ಬಿಜೆಪಿ ಸರ್ಕಾರ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ನಮ್ಮವರನ್ನು ಕರೆದುಕೊಂಡು ಹೋಗಿ ಗಿಫ್ಟ್ ಕೊಟ್ಟಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಸುಭದ್ರವಾಗಿದೆ. ಎಲ್ಲರೂ ಅತ್ಯಂತ ಒಗ್ಗಟ್ಟಿನಿಂದ ಸಹಕಾರ ಕೊಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಲೇವಡಿ‌ ಮಾಡಿದರು.

ಈ ಸರ್ಕಾರ ಬಲಿಷ್ಠವಾಗಿದೆ. ಬಹಳಷ್ಟು ಸಂಖ್ಯಾ ಬಲವಿದೆ. ಸರ್ಕಾರದಲ್ಲಿರುವವರು ಎಲ್ಲರೂ ತುಂಬಾ ಒಗ್ಗಟ್ಟಾಗಿದ್ದಾರೆ. ಸರ್ಕಾರದಲ್ಲಿ ಏನೇನು ಗೊಂದಲವಿಲ್ಲ. ಇನ್ನು ಮುಖ್ಯಮಂತ್ರಿಗಳೋ ಬಹಳ ದೊಡ್ಡವರು ಎಂದು ಸರ್ಕಾರದ ಸಂಪುಟ ಪುನರಚನೆ ಹಾಗೂ ಖಾತೆ ಹಂಚಿಕೆ‌ ಗೊಂದಲದ ಬಗ್ಗೆ ಲೇವಡಿ ಮಾಡಿದರು.

ಟ್ರ್ಯಾಕ್ಟರ್‌ ಜಾಥಾ ಕುರಿತು ಮಾತನಾಡಿ, ಜಾಥಾ ತೆರಳುತ್ತಿರುವ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ಜಪ್ತಿ ಮಾಡಿದರೆ ಅದನ್ನು ಬಿಡಿಸಿಕೊಳ್ಳಲು ನಾವು ಹೋಗುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ