Breaking News

ರೈತರ ಪ್ರತಿಭಟನೆ ವಿರುದ್ಧ ಶೆಟ್ಟರ್ ಕಿಡಿ,ಎಂಪಿಎಂಸಿ ಮುಚ್ಚಿದ್ರೆ ಏನಾಯ್ತು? ಹೊರಗಡೆಯವರಿಗೆ ಅವಕಾಶ ಕೊಟ್ಟು ನೋಡೋಣ

Spread the love

ಹುಬ್ಬಳ್ಳಿ: ಎಪಿಎಂಸಿಯಿಂದ ರೈತರಿಗೆ ಲಾಭವಾಗಿಲ್ಲ. ಎಪಿಎಂಸಿ ಇಲ್ಲ ಅಂದ್ರೆ ಇಲ್ಲ, ಎಂಪಿಎಂಸಿ ಮುಚ್ಚಿದ್ರೆ ಏನಾಯ್ತು? ಹೊರಗಡೆಯವರಿಗೆ ಅವಕಾಶ ಕೊಟ್ಟು ನೋಡೋಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತರು ಬೆಳೆದ ಕೃಷಿ ಉತ್ಪನ್ನಗಳಿಂದ ಇಷ್ಟು ವರ್ಷ ಎಪಿಎಂಸಿಯಲ್ಲಿ ಮಧ್ಯವರ್ತಿಗಳು ಲಾಭ ಪಡೆಯುತ್ತಿದ್ದರು. ತಿದ್ದುಪಡಿ ಕಾಯ್ದೆಯಿಂದ ಹೊರಗಡೆ ವಹಿವಾಟು ನಡೆಸಲು ಅವಕಾಶ ಇರುವುದರಿಂದ ಅದರ ಲಾಭ ನೇರವಾಗಿ ರೈತರಿಗೆ ಸಿಗಲಿದೆ. ಆದರೆ ಕಾಂಗ್ರೆಸ್‍ನವರ ಕುಮ್ಮಕ್ಕಿನಿಂದ ಈಗ ಪ್ರತಿಭಟನೆ ನಡೆಯುತ್ತಿದೆ ಎಂದು ನಾಳೆ ನಡೆಯಲಿರುವ ರೈತರ ಪ್ರತಿಭಟನೆ ವಿರುದ್ಧ ಶೆಟ್ಟರ್ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ