Breaking News
Home / ರಾಜಕೀಯ / ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ

ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ

Spread the love

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಧ್ವಜವೇರಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಪ್ರತಿಭಟನಾಕಾರರು ಕೆಂಪುಕೋಟೆಗೆ ನುಗ್ಗಿ ಕೆಂಪುಕೋಟೆಯ ಮೂರು ಕಡೆಗಳಲ್ಲಿ ಧ್ವಜಾರೋಹಣ ಮಾಡಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಸ್ಥಳದಿಂದ ಎಲ್ಲರನ್ನೂ ಚದುರಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ.

ರೈತರ ಪ್ರತಿಭಟನೆ ಹಾಗೂ ಇಂದು ನಡೆದ ಘಟನೆಗಳ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಪ್ರತಿಭಟನೆ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳದಂತೆ ಕಟ್ಟೆಚ್ಚರ ವಹಿಸುವಂತೆ ಪ್ಯಾರಾಮಿಲಿಟರಿ ದಳಗಳಿಗೆ ಸೂಚನೆ ನೀಡಿದ್ದಾರೆ.

Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ