Home / ರಾಜ್ಯ / ರಾಜೀನಾಮೆ ನೀಡಲ್ಲ; ನನ್ನ ನಿಗಮದ ಮೇಲೆ ಕಣ್ಣಿಟ್ಟವರಿಂದ ಈ ವದಂತಿ; ರಾಜೂಗೌಡ

ರಾಜೀನಾಮೆ ನೀಡಲ್ಲ; ನನ್ನ ನಿಗಮದ ಮೇಲೆ ಕಣ್ಣಿಟ್ಟವರಿಂದ ಈ ವದಂತಿ; ರಾಜೂಗೌಡ

Spread the love

ಯಾದಗಿರಿ: ಸಚಿವ ಸ್ಥಾನ ಸಿಗದ ಹಿನ್ನಲೆ ಅಸಮಾಧಾನಗೊಂಡಿರುವ  ಸುರಪುರ ಶಾಸಕ  ರಾಜುಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಂಬ ಸುದ್ದಿ ದಟ್ಟವಾಗಿತ್ತು. ಈ ಕುರಿತು ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದು, ಇದು ಕೇವಲ ವದಂತಿ. ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿರುವ ತಮ್ಮ  ನಿಗಮದ ಮೇಲೆ ಕಣ್ಣಿಟ್ಟಿರುವ ಯಾರೋ ಬಿಜೆಪಿ ನಾಯಕರೇ ಈ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ತಾವು ಯಾವುದೇ ಕಾರಣಕ್ಕೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು  ಶಾಸಕ ರಾಜೂಗೌಡ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳು ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅವರು ಯಾವುದೇ ಕಾರಣಕ್ಕೂ ಈ ರೀತಿಯ ವದಂತಿಗಳಿಗೆ ಗಮನ ಕೊಡಬಾರದು ಎಂದು ಇದೇ ವೇಳೆ ಮನವಿ ಮಾಡಿದರು. 

ಆನಂದ್​ ಸಿಂಗ್​ ಭೇಟಿ ಕುರಿತು ಸ್ಪಷ್ಟಪಡಿಸಿದ ಅವರು, ಬಿಜೆಪಿ ವರಿಷ್ಠರ ಸೂಚನೆ ಮೆರೆಗೆ ನಿನ್ನೆ ಸಚಿವ ಆನಂದ ಸಿಂಗ್ ಭೇಟಿಯಾಗಿ‌ ಮಾತುಕತೆ ಮಾಡಿದ್ದಾನೆ. ಆನಂದ್ ಸಿಂಗ್ ಖಾತೆ ಬದಲಾಣೆಯಿಂದಾಗಿ ಬೇಸರವಾಗಿತ್ತು. ಇದರಿಂದ ಅವರನ್ನು ಭೇಟಿ ಮಾಡಿ ಸಮಾಧಾನ ಮಾಡುವ ಯತ್ನ ನಡೆಸಿದೆ. ಈ ವೇಳೆ ಅವರು ಬಿಜೆಪಿಗೇ ಯಾವುದೇ ಷರತ್ತು ವಿಧಿಸಿ ಬಂದಿಲ್ಲ ಎಂಬುದನ್ನು ತಿಳಿಸಿದರು ಎಂದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ