ಬೆಂಗಳೂರು : ಮೂರು ಗಂಟೆಗಳ ಕಾಲ ನಡೆದ ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯವಾಗಿದ್ದು, ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರನ್ನು ದಳಪತಿಗಳು ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ಇಂದು ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಸಭೆಯಲ್ಲಿ ಹೊರಟ್ಟಿಯವರ ಬಗ್ಗೆ ಎಲ್ಲಾ ಸದಸ್ಯರು ಒಮ್ಮತ ಸೂಚಿಸಿದ್ದಾರೆ.
ಇನ್ನೂ, ಸಭೆಯಲ್ಲಿ ಶ್ರೀಕಂಠೇಗೌಡ, ಭೋಜೇಗೌಡ, ಬಸವರಾಜ ಹೊರಟ್ಟಿ, ಅಪ್ಪಾಜಿಗೌಡ, ಕಾಂತರಾಜ್, ಗೋವಿಂದ ರಾಜ್, ತಿಪ್ಪೇಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದರು.