ಬೆಂಗಳೂರು (ಜ. 27): ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಅಂದರೆ ಜ. 28ರಿಂದ ಪ್ರಾರಂಭವಾಗಲಿದೆ. ಫೆ. 5ರವರೆಗೆ ಏಳು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಈ ಬಾರಿ 11 ವಿಧೇಯಕಗಳು ಮಂಡನೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅಧಿವೇಶನ ಹಿನ್ನಲೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿವೇಶನಕ್ಕೆ ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವಂತೆ ರಾಜ್ಯಪಾಲರರಾದ ವಾಜೂಭಾಯಿ ಅವರನ್ನು ಆಹ್ವಾನಿಸಲಾಗಿದೆ. ನಾಳೆ ರಾಜ್ಯಪಾಲರ ಭಾಷಣ ಗಳಿಕ ಸಂತಾಪ ಸೂಚನೆ ಮಾಡಲಾಗುವುದು. ನಂತರ ಕಲಾಪವನ್ನು ಮುಂದೂಡಲಾಗುತ್ತದೆ. ಶುಕ್ರವಾರದಿಂದ ಪ್ರಶ್ನೋತ್ತರ ಕಲಾಪ ನಡೆಯಲಿದೆ.
ಈ ಬಾರಿ ಅಧಿವೇಶನದಲ್ಲಿ 11 ಮಸೂದೆಗಳು ಮಂಡನೆಯಾಗುತ್ತವೆ. ಗೋ ಹತ್ಯೆ ನಿಷೇಧ ವಿಧೇಯಕ ಇನ್ನೂ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗುವುದು ಬಾಕಿ ಇದೆ. ಮೂರು ವಿಶ್ವವಿದ್ಯಾಲಯ ಗಳ ವಿಧೇಯಕ ಹಾಗು ಮೂರು ಸುಗ್ರೀವಾಜ್ಞೆ ಗಳ ವಿಧೇಯಕಗಳಿವೆ. ಯಾವುದೇ ಮಸೂದೆಗಳಿದ್ದರೂ ಸರ್ಕಾರ ಮುಂಚಿತವಾಗಿಯೇ ಸಚಿವಾಲಯಕ್ಕೆ ಕಳುಹಿಸಿಕೊಡಬೇಕು. ಇದರಿಂದ ಸದಸ್ಯರಿಗೆ ಚರ್ಚೆಗೆ ಸಿದ್ದವಾಗಿ ಬರಲು ಅವಕಾಶವಾಗುತ್ತದೆ ಎಂದರು.