Breaking News

5A ಕಾಲುವೆ ಅನುಷ್ಠಾನ ಜಾರಿಗಾಗಿ ಮಾಜಿ ಶಾಸಕರಿಂದ ಆಣೆ ಪ್ರಮಾಣ ಪ್ರಹಸನ

Spread the love

ಮಸ್ಕಿ (ರಾಯಚೂರು): ಎನ್‌ಆರ್‌ಬಿಸಿಯ 5A ಕಾಲುವೆ ಅನುಷ್ಠಾನ ಸಾಧ್ಯವಿದ್ದರೆ ಎಲ್ಲ ಪ್ರಯತ್ನಗಳಿಗೂ ನಾವು ಬದ್ಧವಿದ್ದು, ಯಾವ ದೇವರ ಮೇಲೆ ಬೇಕಾದರೂ ಪ್ರಮಾಣ ಮಾಡುವುದಾಗಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.

ಯೋಜನೆ ಜಾರಿ ಬೇಡಿಕೆಯೊಂದಿಗೆ ಕಳೆದ 69 ದಿನಗಳಿಂದ ರೈತರು ಧರಣಿ ನಡೆಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಯೋಜನೆ ಜಾರಿಗೆ ನಾವು ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಬೇಕಾದರೆ ಇನ್ನೂ ಯಾರನ್ನಾದರೂ ಭೇಟಿ ಮಾಡಬೇಕಿದ್ದರೆ ಕರೆಯಿರಿ ಬರುತ್ತೇನೆ. ಅದಕ್ಕೆ ಎಲ್ಲಿ ಬೇಕಾದರೂ ಪ್ರಮಾಣ ಮಾಡುವೆ ಎಂದರು.

ಈ ವೇಳೆ ರೈತರು ಪ್ರತಾಪಗೌಡರೊಂದಿಗೆ ವಾಗ್ವಾದಕ್ಕಿಳಿದ ಪ್ರಸಂಗವೂ ನಡೆಯಿತು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದೆ. ಯೋಜನೆ ಅನುಷ್ಠಾನ ಕೂಡಲೇ ಘೋಷಿಸಬೇಕು ಎಂಬುದು ಪ್ರತಿಭಟನಾನಿರತ ರೈತರ ಪ್ರಮುಖ ಬೇಡಿಕೆಯಾಗಿದೆ.


Spread the love

About Laxminews 24x7

Check Also

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ

Spread the love ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ