Breaking News
Home / Uncategorized / 2, 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗೆ ಒತ್ತು: ಜಗದೀಶ ಶೆಟ್ಟರ್

2, 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗೆ ಒತ್ತು: ಜಗದೀಶ ಶೆಟ್ಟರ್

Spread the love

ದಾವಣಗೆರೆ: ‘ಬೆಂಗಳೂರು ಕೈಗಾರಿಕೆಗಳಿಂದ ತುಂಬಿ ಹೋಗಿದೆ. ಒಂದೇ ಕಡೆ ಎಲ್ಲ ಉದ್ಯಮಗಳು ಕೇಂದ್ರೀಕೃತಗೊಳ್ಳಬಾರದು. ಎಲ್ಲ ಜಿಲ್ಲೆಗಳೂ ಅಭಿವೃದ್ಧಿ ಹೊಂದುವಂತೆ ಆಗಬೇಕು ಎಂದು ನಿರ್ಧರಿಸಿದ್ದೇವೆ. ಅದಕ್ಕಾಗಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡಲಾಗುವುದು’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಕೈಗಾರಿಕೋದ್ಯಮಿಗಳ ಜತೆ ಬುಧವಾರ ಸಭೆ ನಡೆಸಿದ ಅವರು, ‘ಬೆಂಗಳೂರು-ಮುಂಬೈ ಹೆದ್ದಾರಿಯನ್ನು ಕೈಗಾರಿಕಾ ಕಾರಿಡಾರ್‌ ಎಂದು ಗುರುತಿಸಲಾಗಿದೆ. ಈ ಹೆದ್ದಾರಿ ಹಾದುಹೋಗುವ ಎಲ್ಲ ಜಿಲ್ಲೆಗಳಲ್ಲಿ ಕೈಗಾರಿಕೆ ಅಭಿವೃದ್ಧಿಯಾಗುತ್ತಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಭೂಮಿ, ನೀರು, ವಿದ್ಯುತ್‌ ಸಹಿತ ಮೂಲ ಸೌಲಭ್ಯಗಳನ್ನು ಒದಗಿಸುತ್ತೇವೆ. ಉದ್ಯಮ ಸ್ಥಾಪಿಸುವವರಿಗೆ ರಿಯಾಯಿತಿ ನೀಡುತ್ತೇವೆ. ಅವರಿಗೆ ಎಲ್ಲ ಪ್ರೋತ್ಸಾಹ ನೀಡುತ್ತೇವೆ’ ಎಂದರು.

‘ವಿಶೇಷ ಹೂಡಿಕೆ ವಲಯ (ಎಸ್‌ಐಆರ್‌) ಎಂದು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳನ್ನು ಗುರುತಿಸಿ ಆದ್ಯತೆ ನೀಡುವ ಯೋಜನೆ ರೂಪಿಸುತ್ತಿದ್ದೇವೆ’ ಎಂದರು.


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ