ಬೆಂಗಳೂರು: ಬೆಳಗಾವಿ ಗಡಿ ಭಾಗ, ಬೆಳಗಾವಿ ನೆಲ ಕರ್ನಾಟಕದ ಒಂದು ಅಂಗ. ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮಹಾರಾಷ್ಟ್ರ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿನಾಡಿನಲ್ಲಿ ಕನ್ನಡಿಗರೂ ಇದ್ದಾರೆ. ಇತ್ತೀಚೆಗೆ ಮರಾಠಿಗರು ಸಹ ಕರ್ನಾಟಕದ ಶಾಲೆಗಳಲ್ಲಿ ಕಲಿಯಲು ಇಷ್ಟ ಪಡುತ್ತಿದ್ದಾರೆ ಎಂದರು.
ಯಾವ ಮರಾಠಿಗರು ಸಹ ನಾವು ಮಹಾರಾಷ್ಟ್ರಕ್ಕೆ ಹೋಗುತ್ತೇವೆ ಎಂದು ಯಾವತ್ತು ಹೇಳಿಲ್ಲ ಎಂದ ಅವರು, ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ಯಾವುದೇ ಕಾರಣಕ್ಕೂ ಗಡಿ ಜಿಲ್ಲೆ ಮರಾಠಿಗರು ನಿಮ್ಮನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗೆ ತಿರುಗೇಟು ನೀಡಿದರು.