Breaking News

ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ

Spread the love

ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಿದೆ. ಆದರೆ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ, ಬೆಂಗಳೂರಿನಲ್ಲಿಯೇ ಆರಂಭಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತು.

ಬೆಳಗಾವಿಯಲ್ಲಿ ಅಧಿವೇಶನ ನಡೆಸದಿರುವ ಸರ್ಕಾರದ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿತು.

ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಧಿಕ್ಕಾರ ಎಂದು ಬರೆದಿರುವ ಭಿತ್ತಿ ಪತ್ರವನ್ನು ರಾಜ್ಯಪಾಲರ ಭಾಷಣದ ವೇಳೆ ಪ್ರದರ್ಶಿಸಿ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶಿಸಲು ಕಾಂಗ್ರೆಸ್ ಸಿಎಲ್ ಪಿ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ