Breaking News

C.M.ಕುರ್ಚಿ ಖಾಲಿಯಾಗುತ್ತದೆ ನಾನೇ ಸಿಎಂ ಆಗುತ್ತೇನೆ: ಯತ್ನಾಳ್

Spread the love

ದಾವಣಗೆರೆ : ಪಂಚಮಸಾಲಿ ಲಿಂಗಾಯತ ಸಮುದಾಯದ ಪಾದಯಾತ್ರೆ ಬೆಂಗಳೂರು ಸೇರುವ ಮುನ್ನ 2 ಎ ಘೋಷಿಸದಿದ್ದರೆ ನಿಮ್ಮ ಕುರ್ಚಿ ಖಾಲಿಯಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಹರಿಹರದಲ್ಲಿ ಮಾತನಾಡಿದ ಯತ್ನಾಳ್, ನಮ್ಮ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ, ನಾನೇ ನಿಮಗೆ ಕೋಟಿಗಟ್ಟಲೆ ಹಣ ಕೊಡುತ್ತೇನೆ. ಮೀಸಲಾತಿ ಕೊಡುತ್ತೇನೆ ಎಂದು ಸುಮ್ಮನೆ ಯಾಕೆ ಮಾಡುತ್ತೀರಿ? ನಾನು ಮಂತ್ರಿ ಆಗಬೇಕೆಂದು ಯಾರ ಕೈ ಕಾಲು ಹಿಡಿಯುವವನಲ್ಲ. ಸಿಎಂ ಕುರ್ಚಿ ಬರುವುದಿದೆ ಎಂದು ಹೇಳಿದರು.

ನಮ್ಮ ಸಮಾಜದ ಕೆಲವರಿಗೆ ಸಣ್ಣಪುಟ್ಟ ಖಾತೆಗಳನ್ನು ನೀಡಿ ಇಂಧನ, ಹಣಕಾಸು, ಬೆಂಗಳೂರು ನಗರಾಭಿವೃದ್ಧಿ ಖಾತೆಗಳನ್ನು ಸಿಎಂ ತಮ್ಮಲ್ಲೇ ಇಟ್ಟುಕೊಂಡಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬದಲು, ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿಎಂಗೆ ಟಾಂಗ್ ನೀಡಿದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ