Breaking News
Home / ರಾಜ್ಯ / ಸಚಿವ ಮಾಧುಸ್ವಾಮಿಗೆ ಹಿಂದಿನ ಸಾಲು!

ಸಚಿವ ಮಾಧುಸ್ವಾಮಿಗೆ ಹಿಂದಿನ ಸಾಲು!

Spread the love

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ವಿರೋಧ ಪಕ್ಷಗಳು ನಿರಂತರ ನಡೆಸುತ್ತಿದ್ದ ವಾಗ್ದಾಳಿಗೆ ಗುರಾಣಿಯಂತೆ ನಿಲ್ಲುತ್ತಿದ್ದ ಸಚಿವ ಜೆ.ಸಿ.ಮಾಧುಸ್ವಾಮಿಗೆ ಈಗ ‘ಹಿಂಬಡ್ತಿ’ ಆಗಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾಗಿದ್ದಾಗ ಅವರಿಗೆ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಇತ್ತು. ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆ ಬಳಿಕ ಇದೀಗ ಎರಡನೇ ಸಾಲಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಾಧುಸ್ವಾಮಿ ಅವರು ಈ ಹಿಂದಿನಂತೆ ಉತ್ಸಾಹದಲ್ಲಿ ಓಡಾಟ ಮಾಡದೇ, ತಮ್ಮ ಪಾಡಿಗೆ ತಾವು ಕುಳಿತಿದ್ದುದು ಗುರುವಾರ ಆರಂಭ ವಾದ ಅಧಿವೇಶನದಲ್ಲಿ ಕಾಣಿಸಿತು.

ಈ ಹಿಂದಿನ ಅಧಿವೇಶನಗಳಲ್ಲಿ ಬಿಜೆಪಿ ಸರ್ಕಾರ, ಮುಖ್ಯಮಂತ್ರಿ ವಿರುದ್ಧ ಆರೋಪ ಮತ್ತು ವಾಗ್ದಾಳಿ ನಡೆದ ಸಂದರ್ಭ ದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಚ್‌.ಕೆ.ಪಾಟೀಲ ಅವರಂತಹ ಘಟಾನುಘಟಿಗಳನ್ನೇ ಮಾಧುಸ್ವಾಮಿ ತಮ್ಮ ವಾಕ್ಚಾತುರ್ಯದಿಂದ ಹಿಮ್ಮೆಟ್ಟಿಸಿದ್ದರು. ಇನ್ನು ಮುಂದೆ ಆ ಕೆಲಸ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಗಲೇರಿದೆ. ಬೊಮ್ಮಾಯಿ ಮತ್ತು ಆಹಾರ ಸಚಿವ ಉಮೇಶ ಕತ್ತಿಯವರಿಗೆ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ.

ಸಚಿವರ ಸಾಲಿನಲ್ಲಿ ಕೂರದ ಸಿಂಗ್‌

ತಮ್ಮ ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡಿದ್ದ ಸಚಿವ ಆನಂದ್‌ಸಿಂಗ್ ಅವರು ಸಚಿವರಿಗೆ ನಿಗದಿಯಾದ ಆಸನದಲ್ಲಿ ಕೂರದೇ ಶಾಸಕರ ಸಾಲಿನಲ್ಲಿ ಕುಳಿತ್ತಿದ್ದರು. ಅನೇಕ ಶಾಸಕರು ಅವರ ಬಳಿ ಬಂದು ಮಾತನಾಡಿಸಿ ಹೋಗುತ್ತಿದ್ದರು


Spread the love

About Laxminews 24x7

Check Also

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ ಇಬ್ಬರು ಶಿಕ್ಷಕರ ಅಮಾನತು

Spread the love ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ