Breaking News

ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೇಸ್ ನಿರ್ಧಾರ : ಸಿದ್ದರಾಮಯ್ಯ

Spread the love

ಬೆಂಗಳೂರು : ವಿಧಾನ ಮಂಡಲದ ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಲು ವಿಪಕ್ಷ ಕಾಂಗ್ರೆಸ್‌ ನಿರ್ಧರಿಸಿದೆ.
ಕಳೆದ ಅಧಿವೇಶನ ಸಂದರ್ಭದಲ್ಲಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾದಂತೆ ಸದನ ನಡೆಯಲಿಲ್ಲ. ಹೀಗಾಗಿ ಈ ಬಾರಿ ಸಭೆಗೆ ಹೋಗುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಗುರುವಾರ ನಡೆದ ಕಾಂಗ್ರೆಸ್‌ ಶಾಸ ಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರ ಲಾಗಿದೆ. ಈ ಬಗ್ಗೆ ಸ್ಪೀಕರ್‌ ಅವರಿಗೂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಉಭಯ ಸದನಗಳ ಕಲಾಪದ ಎಲ್ಲ ದಿನಗಳಲ್ಲೂ ಸದಸ್ಯರು ಹಾಜರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಈ ಮಧ್ಯೆ ಶುಕ್ರವಾರ ಮತ್ತೂಮ್ಮೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ವಿಧಾನಪರಿಷತ್‌ ಉಪಸಭಾಪತಿ ಸ್ಥಾನಕ್ಕೆ ಹಿರಿಯ ಮುಖಂಡ ಕೆ.ಸಿ. ಕೊಂಡಯ್ಯ ಅವರನ್ನು ಕಣಕ್ಕೆ ಇಳಿಸಲು ಇದೇ ಸಭೆಯಲ್ಲಿ ನಿರ್ಧರಿಸಲಾಗಿದೆ. ಜೆಡಿಎಸ್‌, ಬಿಜೆಪಿ ಮೈತ್ರಿ ಸದನದ ಕಲಾಪ ದಲ್ಲಿ ದಾಖಲಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ಖಚಿತಪಡಿಸಿವೆ.


Spread the love

About Laxminews 24x7

Check Also

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:*ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love ಬೆಂಗಳೂರು, ಜನವರಿ 17: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ