Breaking News
Home / Uncategorized / ರಾಮಮಂದಿರ ನಿರ್ಮಾಣ | ತಾಂತ್ರಿಕ ಉಸ್ತುವಾರಿಯಾಗಿ ಕೋಟೆ ನಾಡಿನ ಎಂಜಿನಿಯರ್ ನೇಮಕ ; ಸಚಿವ ರಮೇಶ್ ಜಾರಕಿಹೊಳಿ‌ ಹರ್ಷ

ರಾಮಮಂದಿರ ನಿರ್ಮಾಣ | ತಾಂತ್ರಿಕ ಉಸ್ತುವಾರಿಯಾಗಿ ಕೋಟೆ ನಾಡಿನ ಎಂಜಿನಿಯರ್ ನೇಮಕ ; ಸಚಿವ ರಮೇಶ್ ಜಾರಕಿಹೊಳಿ‌ ಹರ್ಷ

Spread the love

ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ನೇಮಕವಾಗಿರುವ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿಜಿ ಸೀತಾರಾಮ್‌ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಶುಭಾಶಯ ತಿಳಿಸಿದ್ದಾರೆ.

ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿಜಿ ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ‘ಶ್ರೀ ರಾಮ ಮಂದಿರ’ ದ ತಳಪಾಯದ ಕೆಲಸ ನಡೆಯುತ್ತದೆ. ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ ಪ್ರಭು ಶ್ರೀ ರಾಮನ ಮಂದಿರ ನಿರ್ಮಾಣವಾಗಲಿ ಎಂಬ ಹಾರೈಕೆಯೊಂದಿಗೆ ಸೀತಾರಾಮ್ ಅವರಿಗೆ ಶುಭಾಶಯಗಳು ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ನೀರಿಲ್ಲದಿದ್ದರೇನು..? ಬಿಯರ್ ಇದೆಯಲ್ಲ.. : ಬೆಂಗಳೂರಲ್ಲಿ ಬಿಯರ್‌ಗೆ ಫುಲ್ ಡಿಮ್ಯಾಂಡ್!

Spread the loveಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ಹೆಚ್ಚಾಗುತ್ತಿದ್ದು, ಬಿಯರ್‌ಗೂ ಬೇಡಿಕೆ ಹೆಚ್ಚಾಗಿದೆ. ಮದ್ಯಪ್ರಿಯರು ಹಾಟ್​ ಡ್ರಿಂಕ್ಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ