Breaking News
Home / Uncategorized / ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ: ಸಿಎಂ ಇಬ್ರಾಹಿಂ

ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ: ಸಿಎಂ ಇಬ್ರಾಹಿಂ

Spread the love

ರಾಯಚೂರು: ಮುಖ್ಯಮಂತ್ರಿ ಯಡಿಯೂರಪ್ಪನವರದ್ದು ಸಫಲತೆಗಿಂತ ವಿಫಲತೆನೆ ಜಾಸ್ತಿ. ಕ್ಯಾಬಿನೆಟ್ ಮಾಡುವುದರಲ್ಲೇ ಅವರ ಸಮಯ ಹೋಗುತ್ತಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ವಿಧಾನಸಭೆ ಚುನಾವಣೆ ಬಂದರೂ ನಾವು ಅಚ್ಚರಿ ಪಡಬೇಕಿಲ್ಲ ಅಂತ ಮಾಜಿ ಸಚಿವ ಸಿಎಂ ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ, ಈ ಹಿಂದೆ ಡಿಸೆಂಬರ್‍ನಲ್ಲಿ ರಾಜಕೀಯ ಕೋಲಾಹಲವಾಗುತ್ತೆ ಅಂತ ಹೇಳಿದ್ದೆ ಅದು ನಿಜವಾಗಿದೆ ಎಂದರು. ಕೂಡಲೇ ಚುನಾವಣೆ ಮಾಡಬೇಕು ಅನ್ನೋದು ಬಿಜೆಪಿ ವರಿಷ್ಠರಲ್ಲೂ ಚಿಂತನೆ ಶುರುವಾಗಿದೆ. ಯಡಿಯೂರಪ್ಪನವರು ಮಂತ್ರಿಮಂಡಲ ಪುನಃ ರಚನೆ ಮಾಡುತ್ತಿದ್ದರೂ ಎಲ್ಲವೂ ಸರಿಹೋಗಿಲ್ಲ ಎಂದರು.

ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಆದ್ರೆ ಪಕ್ಷದಲ್ಲಿ ನಿರೀಕ್ಷಿತ ನ್ಯಾಯ ಸಿಕ್ಕಿಲ್ಲ. ಅಲ್ಲೂ ಅಸಮಧಾನ ಇದೆ. ಅಸಾದುದ್ದಿನ್ ಓವೈಸಿ ರಾಜ್ಯದಲ್ಲಿ ಎಂಐಎಂ ಶಾಖೆ ತೆರೆಯಲು ಹೊರಟಿದ್ದಾರೆ. ಅದು ರಾಜ್ಯದ ಹಿತಾಸಕ್ತಿಗೆ ಒಳ್ಳೆಯ ಬೆಳವಣಿಗೆ ಅಲ್ಲ. ಮುಸ್ಲಿಂ ಸಮಾಜದಲ್ಲಿ ಗೊಂದಲದ ವಾತಾವಣ ನಿರ್ಮಾಣವಾಗಿದೆ. ಅಗಸ್ಟ್ ನಲ್ಲಿ ನಮ್ಮ ಎಲ್ಲಾ ಮುಖಂಡರ ಸಭೆ ಕರೆದು ಮುಂದಿನ ನಡೆಯ ತೀರ್ಮಾನ ತೆಗೆದುಕೊಳ್ಳುತ್ತೇವೆ ಅಂತ ತಿಳಿಸಿದರು.
26 ಜನ ಮಂಗಳಮುಖಿಯರನ್ನ ಆರಿಸಿ ಕೇಂದ್ರಕ್ಕೆ ಕಳುಹಿಸಿದ್ದೇವೆ. ಅವರು ಮೋದಿ ಜಪಮಾಡುತ್ತಿದ್ದಾರೆ ಒಂದು ರೂ. ದುಡ್ಡು ತರೋ ಶಕ್ತಿ ಇವರಲ್ಲಿಲ್ಲ. ಜಿಎಸ್ ಟಿಯಲ್ಲಿ 30 ಸಾವಿರ ಕೋಟಿ ರೂಪಾಯಿ ನಮಗೆ ಬರಬೇಕಿದೆ. ಹೆಚ್‍ಇಎಲ್, ಬಿಇಎಲ್ ಮಾರಾಟ ಮಾಡಲಿಕ್ಕೆ ಹೊರಟಿದ್ದಾರೆ. ನಾನು ವಿಮಾನಯಾನ ಸಚಿವನಾಗಿದ್ದಾಗ ಇಲಾಖೆ ಲಾಭದಲ್ಲಿತ್ತು. ನಾನು ಯಾರ ಜಾತಿ ನೋಡಲಿಲ್ಲಾ, ದೇಶಕ್ಕೆ ಒಳ್ಳೆಯದನ್ನ ಮಾಡುವವರನ್ನ ಕೆಲಸಕ್ಕೆ ನೇಮಿಸಿದ್ದೆ ಎಂದರು.


Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ