Breaking News

ಕರ್ನಾಟಕದ ತಂಟೆಗೆ ಬಂದ ಮಹಾರಾಷ್ಟ್ರಕ್ಕೆ ಉಪಮುಖ್ಯಮಂತ್ರಿಗಳು ಖಡಕ್ ತಿರುಗೇಟು.!

Spread the love

ಬೆಂಗಳೂರು : ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದಾಗಿ ದಿನಕ್ಕೊಂದು ಹೇಳಿಕೆ ಕೊಡುತ್ತಿರುವಂತ ಮಹಾರಾಷ್ಟ್ರಕ್ಕೆ, ಛತ್ರಪತಿ ಶಿವಾಜಿ ಪೂರ್ವಜರು ಕರ್ನಾಟಕದವರು ಹಾಗಾಗಿ ಶಿವಾಜಿಯ ಮೂಲಕ ಕರ್ನಾಟಕ. ಮುಂಬೈ ಕರ್ನಾಟಕಕ್ಕೆ ಸೇರಬೇಕು ಎನ್ನುವ ಮೂಲಕ ರಾಜ್ಯದ ತಂಟೆಗೆ ಬಂದಂತ ಮಹಾರಾಷ್ಟ್ರಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಗೋವಿಂದ ಕಾರಜೋಳ ಖಡಕ್ ತಿರುಗೇಟು ನೀಡಿದ್ದಾರೆ.

 

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವಾದಕ್ಕೆ, ಮುಂಬೈ ಕರ್ನಾಟಕಕ್ಕೆ ಸೇರಬೇಕು ಎಂಬುದಾಗಿ ತಿರುಗೇಟು ನೀಡಿದ್ದಾರೆ.

ಇತ್ತ ಡಿಸಿಎಂ ಗೋವಿಂದ ಕಾರಜೋಳ, ಛತ್ರಪತಿ ಶಿವಾಜಿ ಪೂರ್ವಜರು ಕರ್ನಾಟಕದವರು, ಹೀಗಾಗಿ ಶಿವಾಜಿಯ ಮೂಲಕ ಕರ್ನಾಟಕವೆಂದು ಹೇಳುವ ಮೂಲಕ, ಶಿವಾಜಿ ಆರಾಧಿಸುವಂತ ಮರಾಠಿಗರಿಗೆ ಟಾಂಗ್ ನೀಡಿದ್ದಾರೆ.


Spread the love

About Laxminews 24x7

Check Also

ಏಕಾಏಕಿ ಫೀಸ್​​ ಹೆಚ್ಚಳ: ಶಾಲೆಗೆ ಮುತ್ತಿಗೆ ಹಾಕಿದ ಪೋಷಕರು 

Spread the loveದೇವನಹಳ್ಳಿ, ಏಪ್ರಿಲ್​ 09: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ದಿನ ಬಳಕೆಯ ವಸ್ತುಗಳಾದ ಹಾಲು, ಗ್ಯಾಸ್​​, ಪೆಟ್ರೋಲ್​, ಡಿಸೇಲ್​ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ