Breaking News

ಕರ್ನಾಟಕದ ತಂಟೆಗೆ ಬಂದ ಮಹಾರಾಷ್ಟ್ರಕ್ಕೆ ಉಪಮುಖ್ಯಮಂತ್ರಿಗಳು ಖಡಕ್ ತಿರುಗೇಟು.!

Spread the love

ಬೆಂಗಳೂರು : ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದಾಗಿ ದಿನಕ್ಕೊಂದು ಹೇಳಿಕೆ ಕೊಡುತ್ತಿರುವಂತ ಮಹಾರಾಷ್ಟ್ರಕ್ಕೆ, ಛತ್ರಪತಿ ಶಿವಾಜಿ ಪೂರ್ವಜರು ಕರ್ನಾಟಕದವರು ಹಾಗಾಗಿ ಶಿವಾಜಿಯ ಮೂಲಕ ಕರ್ನಾಟಕ. ಮುಂಬೈ ಕರ್ನಾಟಕಕ್ಕೆ ಸೇರಬೇಕು ಎನ್ನುವ ಮೂಲಕ ರಾಜ್ಯದ ತಂಟೆಗೆ ಬಂದಂತ ಮಹಾರಾಷ್ಟ್ರಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಗೋವಿಂದ ಕಾರಜೋಳ ಖಡಕ್ ತಿರುಗೇಟು ನೀಡಿದ್ದಾರೆ.

 

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವಾದಕ್ಕೆ, ಮುಂಬೈ ಕರ್ನಾಟಕಕ್ಕೆ ಸೇರಬೇಕು ಎಂಬುದಾಗಿ ತಿರುಗೇಟು ನೀಡಿದ್ದಾರೆ.

ಇತ್ತ ಡಿಸಿಎಂ ಗೋವಿಂದ ಕಾರಜೋಳ, ಛತ್ರಪತಿ ಶಿವಾಜಿ ಪೂರ್ವಜರು ಕರ್ನಾಟಕದವರು, ಹೀಗಾಗಿ ಶಿವಾಜಿಯ ಮೂಲಕ ಕರ್ನಾಟಕವೆಂದು ಹೇಳುವ ಮೂಲಕ, ಶಿವಾಜಿ ಆರಾಧಿಸುವಂತ ಮರಾಠಿಗರಿಗೆ ಟಾಂಗ್ ನೀಡಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ