Breaking News

ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಮಾಡಿದ್ದೇಕೆ ? ಡಿ.ಕೆ.ಶಿವಕುಮಾರ್

Spread the love

ಬೆಂಗಳೂರು: ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಬಜೆಟ್ ಅಧಿವೇಶವನ್ನು ಬೆಳಗಾವಿಯಲ್ಲಿ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಯಾಕೆ ಮಾಡಿದ್ದೇವೆ ಎಂಬುದನ್ನೇ ಸರ್ಕಾರ ಮರೆತಿದೆ. ಹೀಗಾಗಿ ಅಲ್ಲಿಯೇ ಬಜೆಟ್ ಅಧಿವೇಶ ಮಾಡುವಂತೆ ಒತ್ತಾಯಿಸಿದ್ದೇವೆ. ಆದರೆ ಬಜೆಟ್ ಅಧಿವೇಶನ ಬಳಿಕ ಮುಂದಿನ ಅಧಿವೇಶನ ಬೆಳಗಾವಿಯಲ್ಲಿ ಮಾಡುತ್ತೇವೆ ಎಂದಿದ್ದಾರೆ ಎಂದು ಹೇಳಿದರು.

ಇನ್ನು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆಯಿಲ್ಲ. ಕೊರೊನಾ ಸಂದರ್ಭದಲ್ಲಿ ಆದ ನಷ್ಟಕ್ಕೆ ಪರಿಹಾರ ಸಿಗುವ ಲಕ್ಷಣವೂ ಕಾಣುತ್ತಿಲ್ಲ ಉಳಿದ ವಿಚಾರ ಮತ್ತೆ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love  ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ