Breaking News

ಬಜೆಟ್-21:ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಏರಿಕೆ

Spread the love

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ(ಫೆ.1, 2021) ಸಂಸತ್ ನಲ್ಲಿ ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೇಂದ್ರ ಕೃಷಿ ಕ್ಷೇತ್ರದ ಸಾಲವನ್ನು 16. 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಿರುವುದಾಗಿ ಘೋಷಿಸಿದೆ.

 

ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದು, ಎಲ್ಲಾ ಬೆಳೆಗಳ ಬೆಂಬಲ ಬೆಲೆಯನ್ನು (ಎಂಎಸ್ ಪಿ) ಮತ್ತಷ್ಟು ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.

2013-14ನೇ ಸಾಲಿನಲ್ಲಿ ಗೋಧಿಯನ್ನು ಖರೀದಿಸುವ ಮೂಲಕ ರೈತರಿಗೆ 33,874 ಕೋಟಿ ರೂಪಾಯಿ ಪಾವತಿಸಲಾಗಿತ್ತು. 2019-20ನೇ ಸಾಲಿನಲ್ಲಿ ಆ ಮೊತ್ತ 62,802 ಕೋಟಿಗೆ ಏರಿಕೆಯಾಗಿದ್ದು, 2020-21ನೇ ಸಾಲಿನಲ್ಲಿ 75,060 ಕೋಟಿ ರೂಪಾಯಿಗೆ ಹೆಚ್ಚಳವಾಗಿರುವುದಾಗಿ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಹತ್ತಿ ಬೆಳೆಗಾರರಿಗೆ ಇದೀಗ ಭರ್ಜರಿ ರಿಲೀಫ್ ಕಂಡಿದ್ದಾರೆ. 2013-14ನೇ ಸಾಲಿನಲ್ಲಿ 90 ಕೋಟಿ ರೂಪಾಯಿ ಪಾವತಿಸಲಾಗಿತ್ತು. 2020-21ನೇ ಸಾಲಿನಲ್ಲಿ ಆ ಮೊತ್ತವನ್ನು 25, 000 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಈ ಪಾವತಿಯಿಂದ ದೇಶದ 43.36 ಲಕ್ಷ ರೈತರು ಲಾಭ ಪಡೆದಿದ್ದಾರೆ. ರೈತರಿಗೆ ಅಗತ್ಯವಿರುವ ಎಲ್ಲಾ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


Spread the love

About Laxminews 24x7

Check Also

ಬೆಳಗಾವಿಗೆ ಮೂರು ಹೋಸ ಎಕ್ಸ್‌ಪ್ರೆಸ್ ರೈಲುಗಳ ಆರಂಭ

Spread the loveದಕ್ಷಿಣ ಮಧ್ಯ ರೈಲ್ವೆಯು ಹೈದರಾಬಾದ್, ಸಿಕಂದರಾಬಾದ್ ಮತ್ತು ಚರ್ಲಪಲ್ಲಿಯನ್ನು ಬೆಳಗಾವಿಯೊಂದಿಗೆ ಸಂಪರ್ಕಿಸುವ ಮೂರು ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ