Breaking News
Home / ರಾಜ್ಯ / ನರೇಂದ್ರ ಮೋದಿ ಸರಕಾರ ಬಡವರ ವಿರೋಧಿ ಸರಕಾರ ಎನ್ನುವುದನ್ನು ಈ ಬಜೆಟ್ ಮತ್ತೊಮ್ಮೆ ಸಾಬೀತು: ಲಕ್ಷ್ಮಿ ಹೆಬ್ಬಾಳಕರ್

ನರೇಂದ್ರ ಮೋದಿ ಸರಕಾರ ಬಡವರ ವಿರೋಧಿ ಸರಕಾರ ಎನ್ನುವುದನ್ನು ಈ ಬಜೆಟ್ ಮತ್ತೊಮ್ಮೆ ಸಾಬೀತು: ಲಕ್ಷ್ಮಿ ಹೆಬ್ಬಾಳಕರ್

Spread the love

ಬೆಳಗಾವಿ – ಕೇಂದ್ರ ಸರಕಾರ ಸೋಮವಾರ ಮಂಡಿಸಿರುವ ಬಜೆಟ್ ಬಡವರ ಬೆನ್ನಿಗೆ ಚಿನ್ನದ ಚೂರಿ ಹಾಕಿದಂತಿದೆ ಎಂದು ಶಾಸಕಿ, ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.

ಬಡವರು ಬಳಸುವ ಬಹುತೇಕ ಉತ್ಪನ್ನಗಳ ಮೇಲೆ ಸೆಸ್ ವಿಧಿಸಲಾಗಿದೆ. ಕೊರೋನಾದಿಂದ ಕಂಗೆಟ್ಟಿರುವ ರೈತರು, ಜನಸಾಮಾನ್ಯರಿಗೆ ವಿಶೇಷ ಪ್ಯಾಕೇಜ್ ಏನನ್ನಾದರೂ ಘೋಷಿಸಬಹುದು. ಮುಳುಗಿರುವ ಬಡವರನ್ನು ಮೇಲೆತ್ತುವ ಯೋಜನೆ ಜಾರಿಗೊಳಿಸಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಈ ಹಿಂದೆ ಘೋಷಿಸಿದ್ದ 20 ಲಕ್ಷ ರೂ. ಕೃಷಿ ಪ್ಯಾಕೇಜ್ ಎನ್ನುವ ಕನ್ನಡಿಯೊಳಗಿನ ಗಂಟನ್ನು ಸಮದೂಗಿಸಲು ಈಗ ಪೆಟ್ರೋಲ್, ಡಿಸೆಲ್, ಧಾನ್ಯ, ರಸಗೊಬ್ಬರ, ಪಾಮ್ ಆಯಿಲ್ ಮೊದಲಾದ ಉತ್ಪನ್ನಗಳ ಮೇಲೆ ಸೆಸ್ ಹಾಕಲಾಗಿದೆ. ಇವೆಲ್ಲ ನೇರವಾಗಿ ಬಡವರ ಮೇಲಿನ ಗದಾಪ್ರಹಾರವಾಗಿದೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.

ಕೇಂದ್ರದ ನರೇಂದ್ರ ಮೋದಿ ಸರಕಾರ ಬಡವರ ವಿರೋಧಿ ಸರಕಾರ ಎನ್ನುವುದನ್ನು ಈ ಬಜೆಟ್ ಮತ್ತೊಮ್ಮೆ ಸಾಬೀತುಪಡಿಸಿದೆ. ಚಿನ್ನ, ಬೆಳ್ಳಿಯ ಮೇಲಿನ ಸೆಸ್ ಕಡಿಮೆ ಮಾಡುವ ಮೂಲಕ ಶ್ರೀಮಂತರ ನೆರವಿಗೆ ಸರಕಾರ ಧಾವಿಸಿದಂತಿದೆ. ಬಂಡವಾಳ ಶಾಹಿಗಳ ಕೈಗೇ ದೇಶವನ್ನು ಕೊಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.


Spread the love

About Laxminews 24x7

Check Also

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಜೀವ ಉಳಿಸಿ ದೇವರಾದ ವೋಟ್ ಮಾಡಲು ಬಂದ ಡಾಕ್ಟರ್

Spread the love ಬೆಂಗಳೂರು: ಮತದಾನ ಮಾಡಲು ಬಂದಿದ್ದ ಮತದಾರರೊಬ್ಬರಿಗೆ ಹೃದಯಾಘಾತವಾಗಿದ್ದು (Cardiac arrest), ಈ ವೇಳೆ ಅಲ್ಲಿಯೇ ಇದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ