ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟಿದರೆ ಮತ್ತೆ ಲಾಕ್ಡೌನ್ ಮಾಡಬೇಕಾಗುತ್ತದೆ ಎಂದು 15 ದಿನಗಳ ಹಿಂದೆಯೇ ಕೊರೊನಾ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈಗಲೂ ಕೂಡ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದು, ತಕ್ಷಣಕ್ಕೆ ಲಾಕ್ಡೌನ್ ತೆರವು ಬೇಡ ಬೇಡ ವಿಸ್ತರಿಸಿ ಎಂದಿದ್ದಾರೆ.
ತಜ್ಞರ ಸಲಹೆ ಏನು?
ದಿನದ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಇಂತಹ ಸಂದರ್ಭಗಳಲ್ಲಿ ಮೈಮರೆಯಬಾರದು. ಈಗ ಲಾಕ್ಡೌನ್ ತೆರವು ಮಾಡಿದರೆ ಜುಲೈ ಅಂತ್ಯದಲ್ಲಿ ಕೇಸ್ ಡಬಲ್ ಆಗಲಿದೆ. ಬೆಂಗಳೂರಿನಲ್ಲಿ ಸಮುದಾಯಕ್ಕೆ ಹಬ್ಬಿರುವ ಬಗ್ಗೆ ನಾವು ಯಾವ ಅಧ್ಯಯನ ಮಾಡಿಲ್ಲ. ಸೋಂಕಿನ ವ್ಯಾಪ್ತಿ ಗೊತ್ತಿಲ್ಲದೇ ಏಕಾಏಕಿ ಲಾಕ್ಡೌನ್ ತೆರವು ಒಳ್ಳೆಯದಲ್ಲ ಎಂದು ಸಲಹೆ ನೀಡಿದ್ದಾರೆ.

Laxmi News 24×7