Breaking News

ರೈತರ ಪ್ರತಿಭಟನೆ ನಡೆಯುತ್ತಿರುವ ಸಿಂಘು ಗಡಿಗೆ ಶಿವಸೇನಾ ಸಂಸದ ಸಂಜಯ್ ರಾವತ್

Spread the love

ನವದೆಹಲಿ: ಕಳೆದ ನವೆಂಬರ್ ನಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಗಳ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿರುವ ಪ್ರತಿಭಟನಾ ಸ್ಥಳಗಳಲ್ಲಿ ಒಂದಾದ ದೆಹಲಿ ಮತ್ತು ಹರಿಯಾಣ ನಡುವಿನ ಸಿಂಘು ಗಡಿಗೆ ಶಿವಸೇನೆ ಸಂಸದ ಸಂಜಯ್ ರಾವುತ್ ಮಂಗಳವಾರ ಭೇಟಿ ನೀಡಲಿದ್ದಾರೆ.

60 ದಿನಗಳಿಂದ ರೈತರ ಪ್ರತಿಭಟನೆ ಕೇಂದ್ರವಾಗಿರುವ ಪ್ರತಿಭಟನಾ ಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸಲಹೆ ಮೇರೆಗೆ ಭೇಟಿ ನೀಡಲು ರಾವತ್ ನಿರ್ಧರಿಸಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪಂಜಾಬ್ ಮತ್ತು ಹರಿಯಾಣಾ ದಿಂದ ಹಲವು ರೈತರು ಕಳೆದ ಎರಡು ತಿಂಗಳಿನಿಂದ ಸಿಂಗು ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ