Breaking News

ಬೆಂಗಳೂರು ತಲುಪಿದ ಕುರುಬರ ಪಾದಯಾತ್ರೆ; ಎಲ್ಲೆಲ್ಲಿ ಟ್ರಾಫಿಕ್ ಜಾಮ್?

Spread the love

ಬೆಂಗಳೂರು(ಫೆ. 03): ಕುರುಬರಿಗೆ ಎಸ್​ಟಿ ಮೀಸಲಾತಿ ಸ್ಥಾನಮಾನ ಕಲ್ಪಿಸುವಂತೆ ಒತ್ತಾಯಿಸಿ ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದವರು ಜನವರಿ 15ರಂದು ಆರಂಭಿಸಿರುವ ಬೃಹತ್ ಪಾದಯಾತ್ರೆ ಇಂದು ಬೆಂಗಳೂರು ನಗರವನ್ನ ಪ್ರವೇಶಿಸಿದೆ. ‘ಎಸ್​ಟಿ ನಮ್ಮ ಹಕ್ಕು’ ಹೆಸರಿನಲ್ಲಿ ನಡೆಯುತ್ತಿರುವ ಈ ಪಾದಯಾತ್ರೆ ಬೆಳಗ್ಗೆ 6ಗಂಟೆ ಬಳಿಕ ನಗರಕ್ಕೆ ಅಡಿ ಇಟ್ಟಿತು. ದಾಸರಹಳ್ಳಿ ಶಾಸಕ ಆರ್ ಮಂಜುನಾಥ್ ಅವರು ನಿರಂಜನಾನಂದಪುರಿ ಸ್ವಾಮಿಗಳಿಗೆ ಹೂ, ಹಾರ ಶಾಲು ಹಾಕಿ ಸ್ವಾಗತಿಸಿ ಆಶೀರ್ವಾದ ಪಡೆದರು. ನೆಲಮಂಗಲ ರಸ್ತೆಯ ಮಾದನಾಯಕನಹಳ್ಳಿಯಿಂದ ಸಾಗಿ ಬರುತ್ತಿರುವ ಈ ಪಾದಯಾತ್ರೆ ಸಂಜೆ 5ರ ನಂತರ ಮೆಜೆಸ್ಟಿಕ್ ಬಳಿಯ ಅಣ್ಣಮ್ಮ ದೇವಿ ಮಂದಿರದ ಬಳಿ ಸಮಾಪ್ತಿಗೊಳ್ಳಲಿದೆ.


Spread the love

About Laxminews 24x7

Check Also

ವಿಲೀನ ಆದರೂ ಕೈಮಗ್ಗ ನೇಕಾರರ ಕಾರ್ಯಕ್ರಮ ಮುಂದುವರಿಕೆ

Spread the love ಬೆಳಗಾವಿ: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮವನ್ನು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ