Breaking News
Home / Uncategorized / ಮಾರ್ಕೆಟ್​, ಬಸ್​ನಲ್ಲಿ ಜನಜಂಗುಳಿ ಓಕೆ…ಥಿಯೇಟರ್​ಗೆ ಮಾತ್ರ ನಿರ್ಬಂಧ ಏಕೆ ಎಂದು ಪ್ರಶ್ನಿಸಿದ ಧ್ರುವ ಸರ್ಜಾ

ಮಾರ್ಕೆಟ್​, ಬಸ್​ನಲ್ಲಿ ಜನಜಂಗುಳಿ ಓಕೆ…ಥಿಯೇಟರ್​ಗೆ ಮಾತ್ರ ನಿರ್ಬಂಧ ಏಕೆ ಎಂದು ಪ್ರಶ್ನಿಸಿದ ಧ್ರುವ ಸರ್ಜಾ

Spread the love

ಕೋವಿಡ್​ 19 ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರಿಗೆ ಸೇವೆ, ಶಾಲಾ – ಕಾಲೇಜುಗಳು ಸಹಜ ಸ್ಥಿತಿಯತ್ತ ಮರಳುತ್ತಿವೆ. ಆದರೆ ಫೆಬ್ರವರಿ 28ರವರೆಗೆ ರಾಜ್ಯದ ಚಿತ್ರ ಮಂದಿರಗಳಲ್ಲಿ ಶೇಕಡಾ 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು ಚಂದನವನದ ತಾರೆಯರ ಕಣ್ಣು ಕೆಂಪಗಾಗಿಸಿದೆ.

ಈ ವಿಚಾರವಾಗಿ ಟ್ವೀಟ್​ ಮಾಡಿರುವ ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ, ಮಾರ್ಕೆಟ್​ನಲ್ಲಿ ಗಿಜಿ ಗಿಜಿಗುಡುತ್ತಿರುವ ಜನ, ಬಸ್​ನಲ್ಲೂ ಜನರ ಹಿಂಡೇ ತುಂಬಿರುತ್ತೆ. ಇದ್ಯಾವುದಕ್ಕೂ ಹಾಕದ ನಿರ್ಬಂಧವನ್ನ ಥಿಯೇಟರ್​ಗಳಿಗೆ ಮಾತ್ರ ಏಕೆ ಹಾಕಿದ್ದೀರಿ..? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ನಟ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ʼಪೊಗರುʼ ಸಿನಿಮಾ ಇದೇ ತಿಂಗಳ 19ನೇ ತಾರೀಖಿನಂದು ತೆರೆ ಕಾಣಲಿದೆ. ಈ ನಡುವೆ ರಾಜ್ಯ ಸರ್ಕಾರದ ಈ ಕ್ರಮದಿಂದ ಬೇಸರಗೊಂಡಿರುವ ಧ್ರುವ ಸರ್ಜಾ, ಸರ್ಕಾರಕ್ಕೆ ಟ್ವೀಟ್​ ಮೂಲಕ ಪ್ರಶ್ನೆ ಮಾಡಿದ್ದಾರೆ. ಧ್ರುವ ಸರ್ಜಾ ಮಾತ್ರವಲ್ಲದೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಬಹುತೇಕ ಸದಸ್ಯರು ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.
ಕೊರೊನಾ ಸಂಬಂಧ ಹೊಸ ಮಾರ್ಗಸೂಚಿ ಹೊರಡಿಸಿದ್ದ ಕೇಂದ್ರ ಸರ್ಕಾರ 100 ಪ್ರತಿಶತ ಸೀಟು ಭರ್ತಿಗೆ ಅವಕಾಶ ನೀಡಬಹುದೆಂದು ಹೇಳಿತ್ತು. ಆದರೆ ಈ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನ ಆಯಾ ರಾಜ್ಯ ಸರ್ಕಾರಗಳಿಗೆ ನೀಡಿದೆ.


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ