Breaking News

ಕಂಟೈನ್ಮೆಂಟ್ ಪ್ರದೇಶದಲ್ಲೇ ವೈನ್‍ಶಾಪ್ ಓಪನ್- ಪಾನಮತ್ತರಿಂದ ಬೇಸತ್ತ ಸ್ಥಳೀಯರು

Spread the love

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಕಂಟೈನ್ಮೆಂಟ್ ಪ್ರದೇಶದಲ್ಲಿ ಎಲ್ಲವೂ ಬಂದ್ ಇದ್ದು, ವೈನ್‍ಶಾಪ್ ಮಾತ್ರ ಓಪನ್ ಮಾಡಲಾಗಿದೆ.

ಗ್ರಾಮದಲ್ಲಿ ಪಾಸಿಟಿವ್ ಕೇಸ್ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಅನೇಕ ಏರಿಯಾಗಳನ್ನಿ ಸೀಲ್ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಪ್ರದೇಶದಲ್ಲಿರುವ ಎಲ್ಲಾ ಅಂಗಡಿ ಮುಗ್ಗಟ್ಟುಗಳು, ಜನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

ಆದರೆ ಕಂಟೈನ್ಮೆಂಟ್ ಪ್ರದೇಶದಲ್ಲಿ ಪ್ರಭಾವಿಯೊಬ್ಬರ ವೈನ್‍ಶಾಪ್ ಮಾತ್ರ ಓಪನ್ ಮಾಡಿದ್ದಾರೆ. ಪಾನಮತ್ತರ ಹಾವಳಿಯಿಂದ ಸ್ಥಳೀಯರು ಬೆಸತ್ತಿದ್ದಾರೆ. ಎಲ್ಲವನ್ನೂ ಬಂದ್ ಮಾಡಿ ವೈನ್‍ಶಾಪ್ ಯಾಕೆ ಓಪನ್ ಅಂತ ಆಕ್ರೋಶ ವ್ಯಕ್ತಪಡಿಸಿದರು.

ಕಂಟೈನ್ಮೆಂಟ್ ಪ್ರದೇಶದಲ್ಲಿ ವೈನ್‍ಶಾಪ್ ಅಂದರ್ ದರ್ಬಾರ್ ಬಗ್ಗೆ ಸಂಬಂಧಿಸಿದ ಅಬಕಾರಿ ಇಲಾಖೆಯಿಂದ ಕ್ರಮ ಕೈಗೊಳ್ಳಲಿ ಎಂಬುದು ಸ್ಥಳಿಯತ ಆಗ್ರಹವಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ