Breaking News

Ration Rice ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸ್ತಿದ್ದ ಪಡಿತರ ಅಕ್ಕಿ ಜಪ್ತಿ.. ಲಾರಿ ಚಾಲಕ ಅರೆಸ್ಟ್

Spread the love

ವಿಜಯಪುರ: ಬಸವನಬಾಗೇವಾಡಿ ತಹಶೀಲ್ದಾರ್‌ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಿಸ್ತಿದ್ದ 589 ಮೂಟೆ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಸುಮಾರು ₹7.99 ಲಕ್ಷ ಮೌಲ್ಯದ ಪಡಿತರ ಅಕ್ಕಿ ಜಪ್ತಿಯಾಗಿದೆ.

ಬಾಗಲಕೋಟೆಯಿಂದ ವಿಜಯಪುರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ನಂಬರ್ KA29 B 8299 ನೋಂದಣಿ ಹೊಂದಿರುವ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಒಟ್ಟು 589 ಮೂಟೆ ಪಡಿತರ ಅಕ್ಕಿಯನ್ನು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾ.ಹೆ. 50 ರಲ್ಲಿ ವಶಕ್ಕೆ ಪಡೆಯಲಾಗಿದೆ.

ಸದ್ಯ ಬಸವನಬಾಗೆವಾಡಿ ತಹಶೀಲ್ದಾರ್ ಎಂ.ಎನ್ ಬಳಿಗಾರ್, ಆಹಾರ ನಿರೀಕ್ಷಕ ಪುಲಿಕೇಶಿ ಮೂಕಿಹಾಳ್ ಸೇರಿದಂತೆ ಇತರೆ ಅಧಿಕಾರಿಗಳು ದಾಳಿ ನಡೆಸಿ ಅಕ್ಕಿ ಮೂಟೆಗಳನ್ನು ಜಪ್ತಿ ಮಾಡಿದ್ದಾರೆ. ಹಾಗೂ ಈ ಸಂಬಂಧ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ